ಬ್ರೇಕಿಂಗ್ ನ್ಯೂಸ್
08-11-23 04:35 pm Mangalore Correspondent ಕರಾವಳಿ
ಉಳ್ಳಾಲ, ನ.8: ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳನ್ನ ಸರಿಪಡಿಸಲು ಎರಡು ವಾರಗಳ ಗಡುವು ನೀಡಿದರೂ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡದ ಕಾರಣ ಡಿವೈಎಫ್ ಐ ನಿಯೋಗವು ಬುಧವಾರ ದಿಢೀರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅವ್ಯವಸ್ಥೆ ಸರಿಪಡಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ ನೀಡಿದೆ.
ಉಳ್ಳಾಲದ ಸರಕಾರಿ ಆಸ್ಪತ್ರೆಗೆ ಸುಸಜ್ಜಿತ ನೂತನ ಕಟ್ಟಡ ನಿರ್ಮಾಣಗೊಂಡು ವರ್ಷಗಳೇ ಕಳೆದರೂ ಇಲ್ಲಿ ಖಾಯಂ ಸರಕಾರಿ ವೈದ್ಯರೇ ಇಲ್ಲ. ಆಪರೇಷನ್ ಥಿಯೇಟರ್ ಇದ್ದರೂ ಅಲ್ಲಿ ಆಪರೇಷನ್ ಗಳೇ ನಡೆಯೋದಿಲ್ಲ. ಸ್ಕ್ಯಾನಿಂಗ್, ಡಯಾಲಿಸಿಸ್, ಲ್ಯಾಬ್ ಸೆಂಟರ್ ಗಳೂ ಸಿಬ್ಬಂದಿಗಳಿಲ್ಲದೆ ಧೂಳು ಹಿಡಿದು ಬಿಕೋ ಎನ್ನುತ್ತಿವೆ. ಇಲ್ಲಿ ಇದ್ದ ಶವಾಗಾರಕ್ಕೂ ಬೀಗ ಜಡಿಯಲಾಗಿದೆ. ಬಾಲಿವುಡ್ ಸ್ಟಾರ್ ಸೋನು ಸೂದ್ ದೇಣಿಗೆಯಾಗಿ ನೀಡಿದ್ದ ಆಕ್ಸಿಜನ್ ಸಿಲಿಂಡರ್ ಗಳು ಆಸ್ಪತ್ರೆ ಆವರಣದಲ್ಲಿ ಪಾಲು ಬಿದ್ದಿದೆ.
ಸರಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿದರೂ ಇಲ್ಲಿ ಜನ ಸಾಮಾನ್ಯರಿಗೆ ಬೇಕಾಗಿರುವ ಆರೋಗ್ಯ ಸೇವೆಯೇ ಲಭಿಸದ ವಿರುದ್ಧ ಕಳೆದ ತಿಂಗಳು ಡಿವೈಎಫ್ ಐ ಸಮುದಾಯ ಆರೋಗ್ಯ ಕೇಂದ್ರದ ಮುಂಭಾಗದಲ್ಲೇ ಪ್ರತಿಭಟನೆ ನಡೆಸಿತ್ತು. ಅಂದು ಆರೋಗ್ಯಾಧಿಕಾರಿಗಳು ಎರಡು ವಾರಗಳಲ್ಲಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸದ ಕಾರಣ ಡಿವೈಎಫ್ ಐ ನ ಉಳ್ಳಾಲ ತಾಲೂಕು ಸಮಿತಿಯ ಮುಖಂಡರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವೈದ್ಯಾಧಿಕಾರಿ ಡಾ.ತಾರಾ ಅವರಲ್ಲಿ ಮಾತುಕತೆ ನಡೆಸಿದ ಮುಖಂಡರು ಶೀಘ್ರದಲ್ಲಿ ವೈದ್ಯರ ನೇಮಕ ಹಾಗೂ ಆಸ್ಪತ್ರೆಯ ಎಲ್ಲಾ ವಿಭಾಗಗಳನ್ನು ಸಾರ್ವಜನಿಕರ ಸೇವೆಗೆ ಮುಕ್ತವಾಗಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಧರಣಿಯ ಎಚ್ಚರಿಕೆ ನೀಡಿದರು.
ಡಿವೈಎಫ್ ಐ ಉಳ್ಳಾಲ ತಾಲೂಕು ಅಧ್ಯಕ್ಷರಾದ ರಝಾಕ್ ಮೊಂಟೆಪದವು ಮಾತನಾಡಿ ನಾವು ಕಳೆದ ಬಾರಿ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಪತ್ರಿಕಾಗೋಷ್ಠಿ ಕರೆದು ಆಸ್ಪತ್ರೆ ಸುಸಜ್ಜಿತವಾಗಿದ್ದು ರಾಷ್ಟ್ರದಲ್ಲೇ ನಂ.1 ಗುಣಮಟ್ಟ ಹೊಂದಿದೆ. ಇದರ ವಿರುದ್ಧ ಪ್ರತಿಭಟನೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದರು. ಸದಾಶಿವರು ನಮ್ಮೊಂದಿಗೆ ಬಂದು ಆಸ್ಪತ್ರೆಯನ್ನ ಪರಿಶೀಲಿಸಲಿ, ಇಲ್ಲಿಗೆ ಎಷ್ಟು ವೈದ್ಯರು, ನರ್ಸ್, ಸಿಬ್ಬಂದಿ ಬೇಕೆಂದು ಪಟ್ಟಿ ತಯಾರಿಸಿ ಬಳಿಕ ಈ ಆಸ್ಪತ್ರೆಗೆ ರಾಷ್ಟ್ರೀಯ ಸ್ಥಾನಮಾನ ನೀಡಲಿ ಎಂದರು.
ಖಾಸಗಿ ಆಸ್ಪತ್ರೆ ಜತೆ ಸರಕಾರಿ ಆಸ್ಪತ್ರೆಗಳ ಒಡಂಬಡಿಕೆ ಸಮಂಜಸವಲ್ಲ. ಇಲ್ಲಿಗೆ ಖಾಯಂ ವೈದ್ಯರು, ಸಿಬ್ಬಂದಿಗಳನ್ನ ನೇಮಿಸುವುದು ಸರಕಾರದ ಕರ್ತವ್ಯ.15 ದಿವಸಗಳಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ಮತ್ತೆ ಆಸ್ಪತ್ರೆ ಮುಂದೆ ನಾಗರಿಕರನ್ನ ಸೇರಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆಂದು ರಝಾಕ್ ಎಚ್ಚರಿಕೆ ನೀಡಿದರು. ನಿಯೋಗದಲ್ಲಿ ಡಿವೈಎಫ್ಐ ತಾಲೂಕು ಕಾರ್ಯದರ್ಶಿ ರಿಝ್ವಾನ್ ಹರೇಕಳ, ಉಪಾಧ್ಯಕ್ಷ ರಝಾಕ್ ಮುಡಿಪು, ನಿಕಟಪೂರ್ವ ಅಧ್ಯಕ್ಷ ರಫೀಕ್ ಹರೇಕಳ, ಕಟ್ಟಡ ಕಾರ್ಮಿಕ ಮುಖಂಡ ಇಬ್ರಾಹಿಂ ಮದಕ ಮೊದಲಾದವರು ಉಪಸ್ಥಿತರಿದ್ದರು.
Dyfi leaders make suprise visit to Ullal Government hospital.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm