ಬ್ರೇಕಿಂಗ್ ನ್ಯೂಸ್
09-11-23 05:18 pm Mangalore Correspondent ಕರಾವಳಿ
ಮಂಗಳೂರು, ನ.9: ಕರ್ಣಾಟಕ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದ ವ್ಯಕ್ತಿಯೊಬ್ಬರು ಕತ್ತು ಸೀಳಿಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮಂಗಳೂರಿನ ಬೊಂದೇಲ್ ನಲ್ಲಿರುವ ಅಪಾರ್ಟ್ಮೆಂಟಿನ ಮನೆಯಲ್ಲಿ ಇಂದು ಬೆಳಗ್ಗೆ ಕತ್ತು ಕೊಯ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಂಪ್ವೆಲ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿದ್ದ ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಇಂದು ಬೆಳಗ್ಗೆ ಹತ್ತು ಗಂಟೆ ವೇಳೆಗೆ ಪತ್ನಿ ಮಗುವಿನೊಂದಿಗೆ ಶಾಲೆಯಲ್ಲಿ ಪೇರೆಂಟ್ ಮೀಟಿಂಗ್ ಇದೆಯೆಂದು ತೆರಳಿದ್ದರು.




ಬ್ಯಾಂಕಿನ ವಾಹನ ಚಾಲಕ ವಾದಿರಾಜ್ ಕೆಳಗೆ ಬರುತ್ತಾರೆಂದು ಕಾಯುತ್ತ ಕುಳಿತಿದ್ದರು. ವಾದಿರಾಜ್ ಇನ್ನೂ ಬಂದಿಲ್ಲವೆಂದು ಚಾಲಕ ಮೇಲೆ ಹೋಗಿ ನೋಡಿದಾಗ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಅದಾಗಲೇ ಬಹಳಷ್ಟು ರಕ್ತ ಹೋಗಿದ್ದರಿಂದ ಆಸ್ಪತ್ರೆ ತಲುಪುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಕಳೆದ ಒಂದು ವರ್ಷದಿಂದ ವಾದಿರಾಜ್ ಕುಟುಂಬ ಬೋಂದೇಲ್ ಅಪಾರ್ಟ್ಮೆಂಟ್ ನಲ್ಲಿ ಬಾಡಿಗೆ ಮನೆ ಪಡೆದಿತ್ತು. ಮಂಗಳೂರು ನಗರದ ಪಂಪ್ವೆಲ್ ನಲ್ಲಿರುವ ಕರ್ಣಾಟಕ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ವಾದಿರಾಜ್ ಕರ್ತವ್ಯ ನಿರ್ವಹಿಸುತ್ತಿದ್ದರು.
Mangalore Karnataka Bank General Manager body found at house in Bondel, Suicide suspected. The deceased has been identified as Vadiraj (51). Police commissioner Anupam Agarwal Visits spot.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm