ಬ್ರೇಕಿಂಗ್ ನ್ಯೂಸ್
10-11-23 01:35 pm Udupi Correspondent ಕರಾವಳಿ
ಉಡುಪಿ, ನ.10: ಈಟಿವಿ ಕನ್ನಡ, ದೂರದರ್ಶನ ಟಿವಿಯಲ್ಲಿ ಜಿಲ್ಲಾ ವರದಿಗಾರರಾಗಿದ್ದ ಹಿರಿಯ ಪತ್ರಕರ್ತ ಶಶಿಧರ್ ಹೆಮ್ಮಣ್ಣ (57) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಗುರವಾರ ಬೆಳಗ್ಗೆ ಉಡುಪಿಯ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದ ಅವರನ್ನ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಶಶಿಧರ್ ಹೆಮ್ಮಣ್ಣ ಅವರು ರಾತ್ರಿ ಹೊತ್ತಿಗೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. 1991ರಲ್ಲಿ ಕುಂದಪ್ರಭ ಪತ್ರಿಕೆ ಮೂಲಕ ವೃತ್ತಿ ಜೀವನ ಅರಂಭಿಸಿದ ಶಶಿಧರ್, "ಕ್ಷಿತಿಜ" ಎನ್ನುವ ಸ್ವಂತ ವಾರ ಪತ್ರಿಕೆ ಅರಂಭಿಸಿದ್ದರು. ಬಳಿಕ ಈ ಟಿವಿ ಕನ್ನಡ, ಡಿಡಿ ನ್ಯೂಸ್ ನಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು. ಹಲವು ಉದಯೋನ್ಮುಖ ಪತ್ರಕರ್ತರಿಗೆ ಪ್ರೇರಕರಾಗಿದ್ದ ಹೆಮಣ್ಣ ಅವರು ಪ್ರಜಾವಾಣಿ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕೃಷಿ ಸಂಬಂಧಿತ ಲೇಖನಗಳನ್ನು ಬರೆದು, ಸರಕಾರದ ಗಮನ ಸೆಳೆದಿದ್ದರು.
ಇತ್ತೀಚೆಗಷ್ಟೇ ಕನೆಕ್ಟ್ ಮೀಡಿಯಾ ಸಂಸ್ಥೆಯನ್ನು ಹುಟ್ಟುಹಾಕಿ ಹಲವು ಯೋಜನೆಗಳನ್ನು ರಾಜ್ಯದಾದ್ಯಂತ ಅರಂಭಿಸುವ ಕಾರ್ಯದಲ್ಲಿ ತೊಡಗಿಸಿದ್ದರು. ಪರಿಸರ ಪ್ರೇಮಿಯೂ ಆಗಿದ್ದ ಅವರು, ಕರಾವಳಿಯಲ್ಲಿ ಕಾಂಡ್ಲಾ ವನ ಯೋಜನೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನೆಲ ಜಲ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ 'ನೀರು ಆರುವ ಮುನ್ನ' ಕಾರ್ಯಕ್ರಮದಲ್ಲಿ ಮೂಂಚಣಿಯಲ್ಲಿದ್ದರು. ಮೃತರು ತಂದೆ, ತಾಯಿ, ಪತ್ನಿ, ಪುತ್ರ, ನಾಲ್ಕು ಜನ ಸಹೋದರರು, ಸಹೋದರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Senior journalist Shashidhar Hemmanna (57), who was a district reporter with ETV Kannada and Doordarshan TV, passed away here on Monday following a cardiac arrest.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm