ಬ್ರೇಕಿಂಗ್ ನ್ಯೂಸ್
10-11-23 04:57 pm Mangalore Correspondent ಕರಾವಳಿ
ಪುತ್ತೂರು, ನ.10: ಬಿಜೆಪಿ ಮತ್ತು ಹಿಂದು ಜಾಗರಣ ವೇದಿಕೆಯ ಮುಖಂಡನೊಬ್ಬ ತಲವಾರು ಹಿಡಿದು ಪುತ್ತಿಲ ಪರಿವಾರದ ಕಚೇರಿಗೆ ನುಗ್ಗಲು ಯತ್ನಿಸಿದ್ದಲ್ಲದೆ, ಪರಿವಾರದ ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಪುತ್ತಿಲ ಪರಿವಾರದ ಮುಕ್ರಂಪಾಡಿಯ ಕಚೇರಿಗೆ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಎಂಬಾತ ತನ್ನ ಗುಂಪಿನೊಂದಿಗೆ ತಲವಾರನ್ನು ಬೆನ್ನಿಗೆ ಸಿಕ್ಕಿಸಿಕೊಂಡು ಬಂದು ಗಲಾಟೆ ನಡೆಸಿದ್ದಾನೆ. ತಲವಾರು ಹಿಡಿದು ಮನೀಶ್ ಕುಲಾಲ್ ಇಲ್ಲವೇ.. ಆತನನ್ನು ಬಿಡೋದಿಲ್ಲ ಎಂದು ಹೇಳಿ ದಾಂಧಲೆ ನಡೆಸಲು ಯತ್ನಿಸಿದ್ದಾನೆ. ಕೂಡಲೇ ಪೊಲೀಸರಿಗೆ ವಿಷಯ ತಿಳಿಸಿದ್ದು ದಿನೇಶ್ ಸೇರಿ ಐವರನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದಾರೆ. ಕೃತ್ಯದ ಸಂದರ್ಭದಲ್ಲಿ ಮನೀಶ್ ಕುಲಾಲ್ ಸ್ಥಳದಲ್ಲಿ ಇರಲಿಲ್ಲ. ಇತರ ಪ್ರಮುಖರು ಸ್ಥಳದಲ್ಲಿದ್ದು ತಲವಾರು ಹಿಡಿದು ಬಂದಿದ್ದವರನ್ನು ಸಮಾಧಾನ ಪಡಿಸಿದ್ದಾರೆ.


ತಲವಾರನ್ನು ಬೆನ್ನಿಗೆ ಕಟ್ಟಿಕೊಂಡು ಬೆದರಿಕೆ ಹಾಕುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುತ್ತಿಲ ಪರಿವಾರದ ಪ್ರಮುಖ ಮನೀಶ್ ಕುಲಾಲ್ ಗುರಿಯಾಗಿಸಿ ತಲವಾರು ದಾಳಿಗೆ ಮುಂದಾಗಿದ್ದರು ಎನ್ನಲಾಗುತ್ತಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಪೊಲೀಸ್ ಠಾಣೆ ಎದುರಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ಮುಖಂಡರು ಜಮಾಯಿಸಿದ್ದಾರೆ. ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರತಿಕ್ರಿಯಿಸಿ, ರೌಡಿಸಂ ರೀತಿಯಲ್ಲಿ ಇನ್ನೊಬ್ಬ ಕಾರ್ಯಕರ್ತನನ್ನು ಕೊಲ್ಲುವ ಜಾಯಮಾನ ಪುತ್ತೂರಿನಲ್ಲಿ ಬಂದಿದೆ. ಇದನ್ನು ಪುತ್ತೂರಿನ ಜನತೆ ಸಹಿಸುವುದಿಲ್ಲ. ಪೊಲೀಸರು ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಸಭೆ ಚುನಾವಣೆ ಬಳಿಕ ಸಂಘ ಪರಿವಾರದಲ್ಲೇ ವಿಭಜನೆಯಾಗಿದ್ದು ಬಿಜೆಪಿ, ಹಿಂದು ಜಾಗರಣ ವೇದಿಕೆ ಇನ್ನಿತರ ಸಂಘಟನೆಗಳ ವಿರುದ್ಧ ಅರುಣ್ ಪುತ್ತಿಲ ಪರ್ಯಾಯವಾಗಿ ಪುತ್ತಿಲ ಪರಿವಾರ ಎನ್ನುವ ಸಂಘಟನೆ ಕಟ್ಟಿದ್ದಾರೆ. ಇದೇ ವಿಚಾರದಲ್ಲಿ ಕಾರ್ಯಕರ್ತರ ನಡುವೆ ವೈಷಮ್ಯ, ಕಿತ್ತಾಟ ನಡೀತಾನೆ ಬಂದಿದೆ. ಈಗ ಜಾಲತಾಣದಲ್ಲಿ ಏನೋ ಪೋಸ್ಟ್ ಹಾಕಿದ್ದಾರೆ, ಮಾತಿಗೆ ಮಾತಾಗಿದೆ ಎನ್ನುವ ನೆಪದಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದವರು ಪುತ್ತಿಲ ಪರಿವಾರದ ಕಚೇರಿಗೆ ನುಗ್ಗಿ ತಲವಾರು ತೋರಿಸಿ ಬೆದರಿಕೆ ಹಾಕಿದ್ದಾರೆ.
5 BJP members arrested for showing talwar sword at Arun Puthila office in Puttur. Five persons wielding swords created ruckus in front of Hindu leader Arun Kumar Puthila’s office at Mukrampadi here in broad daylight on Friday.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm