ಬ್ರೇಕಿಂಗ್ ನ್ಯೂಸ್
10-11-23 05:57 pm Udupi Correspondent ಕರಾವಳಿ
ಉಡುಪಿ, ನ.10: ನಾಗಲ್ಯಾಂಡ್, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿದ್ದ, ಉಡುಪಿ ಮೂಲದ ಪದ್ಮನಾಭ ಬಾಲಕೃಷ್ಣ ಆಚಾರ್ಯ (ಪಿ.ಬಿ. ಆಚಾರ್ಯ) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದರು.
ಮಣಿಪುರ, ನಾಗಲ್ಯಾಂಡ್, ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿ ಬಳಿಕ ಮುಂಬೈನಲ್ಲಿ ನೆಲೆಸಿದ್ದರು. ಉಡುಪಿಯಲ್ಲಿ ಬಾಲಕೃಷ್ಣ - ರಾಧಾ ಆಚಾರ್ಯ ದಂಪತಿ ಪುತ್ರನಾಗಿ 1931ರ ಅ.8ರಂದು ಜನಿಸಿದ್ದರು. ಎಂಜಿಎಂ ಕಾಲೇಜು ಆರಂಭದಲ್ಲಿ ಪದವಿ ತರಗತಿಯ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿದ್ದರು.
ಪದವಿ ಬಳಿಕ ಮುಂಬೈಗೆ ತೆರಳಿದ್ದ ಪದ್ಮನಾಭ ಆಚಾರ್ಯ ಅವರು ಶಿಕ್ಷಣ ಮತ್ತು ಉದ್ಯೋಗವನ್ನು ಜೊತೆಗೆ ನಿರ್ವಹಿಸುತ್ತ ಎಬಿವಿಪಿಯಲ್ಲಿ ತೊಡಗಿಸಿಕೊಂಡಿದ್ದರು. ನಂತರ, ಎಬಿವಿಪಿ ಸಂಘಟನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮುಂಬೈ ವಿವಿಯಲ್ಲಿ ಎಲ್ಎಲ್ಬಿ ಪದವಿ ಪಡೆದಿದ್ದ ಅವರು ಮುಂಬೈ ವಿವಿಯ ಸೆನೆಟ್ ಸದಸ್ಯರೂ ಆಗಿದ್ದರು. ಈಶಾನ್ಯ ರಾಜ್ಯಗಳಲ್ಲಿ ಪೂರ್ಣಾವಧಿ ಕಾರ್ಯಕರ್ತರಾಗಿ ಅಲ್ಲಿನ ಅಭಿವೃದ್ಧಿ ಮತ್ತು ಶೈಕ್ಷಣಿಕ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಬಳಿಕ ಈಶಾನ್ಯ ರಾಜ್ಯಗಳ ರಾಜ್ಯಪಾಲರಾಗಿ ನಿಯುಕ್ತಗೊಂಡು ಅಲ್ಲಿಯೇ ನೆಲೆಸಿದ್ದರು. ಪತ್ನಿ ಸವಿತಾ ಆಚಾರ್ಯ, ಮೂವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
Popularly known as ‘PB’, he breathed his last at his home in Andheri west and the funeral shall be performed this evening at the nearby Oshiwara Crematorium.Born on October 8, 1931 in Udupi (Karnataka), Acharya completed his school and college education there before coming to Mumbai and acquired a law degree from University of Mumbai, subsequently joining a business along with one of his brothers here.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm