ಬ್ರೇಕಿಂಗ್ ನ್ಯೂಸ್
11-11-23 10:16 pm Mangalore Correspondent ಕರಾವಳಿ
ಮಂಗಳೂರು, ನ.11: ಕಾಸರಗೋಡು ಜಿಲ್ಲೆಯ ಅನಂತಪುರ ದೇವಸ್ಥಾನದಲ್ಲಿ ಮತ್ತೆ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ದೇವಳದ ಕೆರೆಯಲ್ಲಿದ್ದ ಮೊಸಳೆ ಬಬಿಯಾ ಸಾವನ್ನಪ್ಪಿದ ಒಂದು ವರ್ಷದ ಬಳಿಕ ದಿಢೀರ್ ಅನ್ನುವಂತೆ ಮರಿ ಮೊಸಳೆಯೊಂದು ಕಾಣಿಸಿದ್ದು ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.
ಕುಂಬಳೆ ಸಮೀಪದ ನಾಯ್ಕಾಪು ಗ್ರಾಮದ ಅನಂತಪದ್ಮನಾಭ ಕ್ಷೇತ್ರ ಸರೋವರ ಕ್ಷೇತ್ರ ಎಂದೇ ಪ್ರಸಿದ್ಧಿ. ಈ ಹಿಂದೆ 70 ವರ್ಷಗಳಿಂದಲೂ ದೇವಳದ ಕೆರೆಯಲ್ಲಿ ಬದುಕಿತ್ತು ಎನ್ನಲಾಗಿದ್ದ ಬಬಿಯಾ ಮೊಸಳೆ, ದಿನವೂ ಅರ್ಚಕರು ನೀಡುತ್ತಿದ್ದ ನೈವೇದ್ಯ ಕಾರಣದಿಂದಲೇ ಪ್ರಸಿದ್ಧಿ ಪಡೆದಿತ್ತು. ದಿನವೂ ಬೆಳಗ್ಗೆ ಮತ್ತು ಸಂಜೆ ವೇಳೆಗೆ ಭಕ್ತರಿಗೂ ದರ್ಶನ ನೀಡುತ್ತಿತ್ತು. ಉಳಿದಂತೆ ಕೆರೆಯ ಸುರಂಗದಲ್ಲಿಯೇ ತನ್ನಷ್ಟಕ್ಕೆ ಮಲಗಿಕೊಂಡಿರುತ್ತಿತ್ತು. ಆ ಮೊಸಳೆ ಎಷ್ಟು ಸಾಧುವಾಗಿತ್ತು ಎಂದರೆ, ಕೆಲವೊಮ್ಮೆ ದೇವಸ್ಥಾನದ ಅಂಗಣಕ್ಕೂ ಬಂದು ಮಲಗಿಕೊಂಡಿರುತ್ತಿತ್ತು. ಇದನ್ನು ನೋಡಿದವರು ಕ್ರೂರ ಪ್ರಾಣಿಯಾದ ಮೊಸಳೆ ಸಾಧುವಾಗಿದ್ದು ಹೇಗೆ ಮತ್ತು ಸಸ್ಯಾಹಾರಿ ಆಗಿದ್ದು ಹೇಗೆ ಎಂದು ಚಕಿತರಾಗಿದ್ದರು.



ಇದೀಗ ಅಂತಹುದೇ ರೀತಿಯ ಮೊಸಳೆ ದೇವಸ್ಥಾನದ ಕೆರೆಯಲ್ಲಿ ಪ್ರತ್ಯಕ್ಷವಾಗಿದೆ. ಕೆಲವು ದಿನಗಳ ಹಿಂದೆ ಕಾಞಂಗಾಡಿನಿಂದ ಬಂದಿದ್ದ ಕುಟುಂಬಕ್ಕೆ ಆ ಮೊಸಳೆ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಆನಂತರ, ಕೆರೆಯ ಮೂಲೆಯಲ್ಲಿ ಅರ್ಚಕರಿಗೂ ಕಂಡುಬಂದಿದೆ ಎನ್ನಲಾಗುತ್ತಿದ್ದು, ಇದರ ಫೋಟೋ, ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಅನಂತಪುರ ದೇವಸ್ಥಾನ ಕೆರೆಯ ಮಧ್ಯದಲ್ಲಿದ್ದು, ಸುತ್ತ ನೀರು ಆವರಿಸಿಕೊಂಡಿದೆ. ಕೆರಯಲ್ಲಿ ಸಾಕಷ್ಟು ಮೀನುಗಳು ತುಂಬಿಕೊಂಡಿದ್ದು, ಬಬಿಯಾ ಮೊಸಳೆ ನೀರಿನಲ್ಲಿದ್ದರೂ ಅವನ್ನು ತಿನ್ನದೆ ತನ್ನಷ್ಟಕ್ಕೆ ಇದ್ದುದು ಅಚ್ಚರಿಗೂ ಕಾರಣವಾಗಿತ್ತು. ಅರ್ಚಕರು ಬಬಿಯಾ ಎಂದು ಕರೆದರೆ, ಸುರಂಗದಿಂದ ಎದ್ದು ಬರುತ್ತಿತ್ತು. ಇದೀಗ ಮತ್ತೊಂದು ಮೊಸಳೆ ಪ್ರತ್ಯಕ್ಷ ಆಗಿದ್ದು, ಮೀನುಗಳನ್ನು ತಿಂದು ಹಾಕುತ್ತಾ, ಭಕ್ತರ ಪಾಲಿಗೆ ಪವಾಡ ಸೃಷ್ಟಿಸುತ್ತಾ ಅನ್ನುವ ಕುತೂಹಲ ಕೆರಳಿಸಿದೆ.
ಬಬಿಯಾ ಮೊಸಳೆ 2022ರ ಅಕ್ಟೋಬರ್ 10ರಂದು ಸಾವನ್ನಪ್ಪಿತ್ತು. ದೇವರ ಮೊಸಳೆ ಎಂದೇ ಹೆಸರಾಗಿದ್ದ ಬಬಿಯಾಗೆ ವಿಶೇಷ ಕ್ರಿಯಾದಿಗಳನ್ನು ನೆರವೇರಿಸುವ ಮೂಲಕ ಅಂತ್ಯಕ್ರಿಯೆ ನಡೆಸಲಾಗಿತ್ತು. ದೇಗುಲದ ಆಕರ್ಷಣೆಯಾಗಿದ್ದ ಮೊಸಳೆಯ ಸಾವು ಭಕ್ತರಿಗೂ ನಿರಾಸೆ ಉಂಟುಮಾಡಿತ್ತು. ಇದೀಗ ಮತ್ತೆ ಅಂತಹುದೇ ಮೊಸಳೆ ಕಾಣಿಸಿದ್ದು ಜನರನ್ನು ಆಕರ್ಷಿಸಿದೆ.
13 months of Babiyas death, another crocodile seen at Ananthapura Lake Temple in Kasargod. Thirteen months after the death of crocodile Babiya, another crocodile has been spotted at at Ananthapura Lake Temple here. This is a cause of surprise among the devotees. Babiya had a history in the temple and worshiped for 75 years. However, it died on October 9, 2022.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm