ಬ್ರೇಕಿಂಗ್ ನ್ಯೂಸ್
13-11-23 01:25 pm Mangalore Correspondent ಕರಾವಳಿ
ಉಳ್ಳಾಲ, ನ.13: ದೇರಳಕಟ್ಟೆಯಲ್ಲಿ ಯು.ಟಿ.ಫರೀದ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಸೌಹಾರ್ದ ಕ್ರೀಡಾಕೂಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತನ ಅಭಿಯಾನದ ಅಂಗವಾಗಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಸುಪುತ್ರಿ ಹವ್ವಾ ನಸೀಮ ಅವರು ಕೈ ಪಕ್ಷದ ಸದಸ್ಯತನ ಸೇರ್ಪಡೆಗೆ ಸಹಿ ಮಾಡಿದರು.
ಯು.ಟಿ.ಫರೀದ್ ಫೌಂಡೇಶನ್ ವತಿಯಿಂದ ದೀಪಾವಳಿ ಪ್ರಯುಕ್ತ ಭಾನುವಾರ ದೇರಳಕಟ್ಟೆ ಕಣಚೂರು ಮೈದಾನದಲ್ಲಿ 'ಸೌಹಾರ್ದ ಕ್ರೀಡಾಕೂಟ' ನಡೆಯಿತು. ಕ್ರೀಡಾಕೂಟವನ್ನ ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಅಬ್ದುಲ್ ರಹ್ಮಾನ್ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಸೌಹಾರ್ದ ವಾತಾವರಣ ನಿರ್ಮಿಸುವಲ್ಲಿ ಕ್ರೀಡಾಕೂಟ ಸಹಕಾರಿ, ದೀಪಾವಳಿ ಹಬ್ಬದ ಸಂದರ್ಭ ಅಯೋಜಿಸಿರುವ ಕ್ರೀಡಾಕೂಟ ನಾಡಿನಾದ್ಯಂತ ಸೌಹಾರ್ದ ಸಂದೇಶ ಪಸರಿಸಲಿ ಎಂದರು.


ಮೂಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಮಾತನಾಡಿ ಧರ್ಮಗಳ ನಡುವೆ ದ್ವೇಷಕ್ಕೆ ನಾಂದಿಯಾಗುವ ಭಾಷಣದ ಬದಲು ಐಕ್ಯತೆ, ಸಾಮರಸ್ಯ ಬೆಸೆಯುವ ಮಾತುಗಳು ನಾಗರಿಕ ಸಮಾಜಕ್ಕೆ ಅಗತ್ಯವಿದೆ. ಸಮಾಜದ ಎಲ್ಲ ಧರ್ಮೀಯರನ್ನ ಒಗ್ಗೂಡಿಸುವಲ್ಲಿ ಕ್ರೀಡೆಯ ಪಾತ್ರ ಮಹತ್ವದ್ದಾಗಿದೆ ಎಂದರು. ಈ ವೇಳೆ ಪದವಿ ಶಿಕ್ಷಣ ಪಡೆಯುತ್ತಿರುವ ಸ್ಪೀಕರ್ ಯು.ಟಿ.ಖಾದರ್ ಅವರ ಪುತ್ರಿ ಹವ್ವಾ ನಸೀಮಾ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಸಹಿ ಮಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸದಸ್ಯ ಸುರೇಶ್ ಭಟ್ನಗರ, ಉಪಾಧ್ಯಕ್ಷ ದಿನೇಶ್ ರೈ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಹಿರಿಯರಾದ ಬಾಬು ಸುವರ್ಣ, ಹರ್ಷರಾಜ್ ಮುದ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಚಂದ್ರಿಕಾ ರೈ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.
Speaker U T Khader daughter Hawa officially becomes member of congress party at Ullal in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm