ಬ್ರೇಕಿಂಗ್ ನ್ಯೂಸ್
13-11-23 06:53 pm Mangalore Correspondent ಕರಾವಳಿ
ಉಡುಪಿ, ನ.13: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಒಮ್ಮಿಂದೊಮ್ಮೆಲೇ ಬೆಂಕಿ ಹತ್ತಿಕೊಂಡಿದ್ದು, ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ. ಧಗ ಧಗನೆ ಉರಿದ ಬೆಂಕಿಯ ಕೆನ್ನಾಲಿಗೆಗೆ ಬಾನಲ್ಲಿ ದಟ್ಟ ಹೊಗೆ, ಉರಿ ಜ್ವಾಲೆಯನ್ನು ಸೃಷ್ಟಿಸಿತ್ತು.
ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳಗ್ಗೆ ಬೆಂಕಿಯದ್ದೇ ಸದ್ದು. ಒಂದೆರಡಲ್ಲ ಹತ್ತಕ್ಕೂ ಹೆಚ್ಚು ಬೋಟುಗಳಿಗೆ ಹಠಾತ್ ಬೆಂಕಿ ಹತ್ತಿಕೊಂಡಿದ್ದು, ಸಮುದ್ರ ಬದಿಯಲ್ಲಿ ಗಾಳಿಯೊಂದಿಗೆ ಬೆಂಕಿ ಸರಸವಾಡಿದಂತಿತ್ತು. ಇಷ್ಟಕ್ಕೂ ಬೆಂಕಿ ಬೀಳೋದಕ್ಕೆ ಅಲ್ಲಿಯೇ ದೀಪಾವಳಿ ಪಟಾಕಿ ಸಿಡಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕರು ಕಾರಣವಂತೆ. ಕಾರ್ಮಿಕರು ಹಾರಿಸಿದ್ದ ಪಟಾಕಿಯ ಕಿಡಿ ನೇರವಾಗಿ ಬೋಟು ಮೇಲಕ್ಕೆ ಬಿದ್ದಿದೆ. ಬೋಟನ್ನು ತೀರಕ್ಕೆ ತಂದು ಮೇಲ್ಗಡೆ ತೆಂಗಿನ ಗರಿಯನ್ನು ಮುಚ್ಚಲಾಗಿತ್ತು. ತೆಂಗಿನ ಗರಿಗಳು ಬಿಸಿಲಿಗೆ ಒಣಗಿದ್ದರಿಂದ ಪಟಾಕಿಯ ಬಾಣದ ಬಿರುಸಿಗೆ ಬೆಂಕಿಯ ಜ್ವಾಲೆ ಏಳುವಂತೆ ಮಾಡಿತ್ತು. ಗಾಳಿಯಿಂದಾಗಿ ಬೆಂಕಿ ಅಕ್ಕಪಕ್ಕದಲ್ಲಿ ಹರಡಿದ್ದು ಅಲ್ಲಿ ನಿಲ್ಲಿಸಿದ್ದ ಹನ್ನೊಂದು ಬೋಟುಗಳಿಗೂ ಹರಡಿದೆ. ಧಗ ಧಗನೆ ಹೊತ್ತಿಕೊಂಡಿದ್ದು, ಅಲ್ಲಿಯೇ ನಿಲ್ಲಿಸಿದ್ದ ಎರಡು ಬೈಕ್ ಕೂಡ ಹೊತ್ತಿ ಉರಿದು ಹೋಗಿದೆ.



ದೀಪಾವಳಿ ನಿಮಿತ್ತ ಕಾರ್ಮಿಕರು ರಜೆಯಲ್ಲಿದ್ದರೆ, ಮೀನುಗಾರರು ಬೋಟನ್ನು ನಿಲ್ಲಿಸಿ ತಮ್ಮ ಮನೆಗೆ ತೆರಳಿದ್ದರು. ಬೆಂಕಿ ಬಿದ್ದ ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 5 ಕೋಟಿಗೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.
Kundapur Eight boats go up in flames after fire breaks out in harbour. Eight boats that were anchored on the river bank, were gutted in a fire mishap on Monday November 13 at Manganese Road of Gangolli. The loss is estimated to run into crore of rupees.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm