ಬ್ರೇಕಿಂಗ್ ನ್ಯೂಸ್
13-11-23 06:53 pm Mangalore Correspondent ಕರಾವಳಿ
ಉಡುಪಿ, ನ.13: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಒಮ್ಮಿಂದೊಮ್ಮೆಲೇ ಬೆಂಕಿ ಹತ್ತಿಕೊಂಡಿದ್ದು, ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ. ಧಗ ಧಗನೆ ಉರಿದ ಬೆಂಕಿಯ ಕೆನ್ನಾಲಿಗೆಗೆ ಬಾನಲ್ಲಿ ದಟ್ಟ ಹೊಗೆ, ಉರಿ ಜ್ವಾಲೆಯನ್ನು ಸೃಷ್ಟಿಸಿತ್ತು.
ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳಗ್ಗೆ ಬೆಂಕಿಯದ್ದೇ ಸದ್ದು. ಒಂದೆರಡಲ್ಲ ಹತ್ತಕ್ಕೂ ಹೆಚ್ಚು ಬೋಟುಗಳಿಗೆ ಹಠಾತ್ ಬೆಂಕಿ ಹತ್ತಿಕೊಂಡಿದ್ದು, ಸಮುದ್ರ ಬದಿಯಲ್ಲಿ ಗಾಳಿಯೊಂದಿಗೆ ಬೆಂಕಿ ಸರಸವಾಡಿದಂತಿತ್ತು. ಇಷ್ಟಕ್ಕೂ ಬೆಂಕಿ ಬೀಳೋದಕ್ಕೆ ಅಲ್ಲಿಯೇ ದೀಪಾವಳಿ ಪಟಾಕಿ ಸಿಡಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕರು ಕಾರಣವಂತೆ. ಕಾರ್ಮಿಕರು ಹಾರಿಸಿದ್ದ ಪಟಾಕಿಯ ಕಿಡಿ ನೇರವಾಗಿ ಬೋಟು ಮೇಲಕ್ಕೆ ಬಿದ್ದಿದೆ. ಬೋಟನ್ನು ತೀರಕ್ಕೆ ತಂದು ಮೇಲ್ಗಡೆ ತೆಂಗಿನ ಗರಿಯನ್ನು ಮುಚ್ಚಲಾಗಿತ್ತು. ತೆಂಗಿನ ಗರಿಗಳು ಬಿಸಿಲಿಗೆ ಒಣಗಿದ್ದರಿಂದ ಪಟಾಕಿಯ ಬಾಣದ ಬಿರುಸಿಗೆ ಬೆಂಕಿಯ ಜ್ವಾಲೆ ಏಳುವಂತೆ ಮಾಡಿತ್ತು. ಗಾಳಿಯಿಂದಾಗಿ ಬೆಂಕಿ ಅಕ್ಕಪಕ್ಕದಲ್ಲಿ ಹರಡಿದ್ದು ಅಲ್ಲಿ ನಿಲ್ಲಿಸಿದ್ದ ಹನ್ನೊಂದು ಬೋಟುಗಳಿಗೂ ಹರಡಿದೆ. ಧಗ ಧಗನೆ ಹೊತ್ತಿಕೊಂಡಿದ್ದು, ಅಲ್ಲಿಯೇ ನಿಲ್ಲಿಸಿದ್ದ ಎರಡು ಬೈಕ್ ಕೂಡ ಹೊತ್ತಿ ಉರಿದು ಹೋಗಿದೆ.



ದೀಪಾವಳಿ ನಿಮಿತ್ತ ಕಾರ್ಮಿಕರು ರಜೆಯಲ್ಲಿದ್ದರೆ, ಮೀನುಗಾರರು ಬೋಟನ್ನು ನಿಲ್ಲಿಸಿ ತಮ್ಮ ಮನೆಗೆ ತೆರಳಿದ್ದರು. ಬೆಂಕಿ ಬಿದ್ದ ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 5 ಕೋಟಿಗೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.
Kundapur Eight boats go up in flames after fire breaks out in harbour. Eight boats that were anchored on the river bank, were gutted in a fire mishap on Monday November 13 at Manganese Road of Gangolli. The loss is estimated to run into crore of rupees.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm