ಬ್ರೇಕಿಂಗ್ ನ್ಯೂಸ್
13-11-23 06:53 pm Mangalore Correspondent ಕರಾವಳಿ
ಉಡುಪಿ, ನ.13: ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಒಮ್ಮಿಂದೊಮ್ಮೆಲೇ ಬೆಂಕಿ ಹತ್ತಿಕೊಂಡಿದ್ದು, ಹತ್ತಕ್ಕೂ ಹೆಚ್ಚು ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ. ಧಗ ಧಗನೆ ಉರಿದ ಬೆಂಕಿಯ ಕೆನ್ನಾಲಿಗೆಗೆ ಬಾನಲ್ಲಿ ದಟ್ಟ ಹೊಗೆ, ಉರಿ ಜ್ವಾಲೆಯನ್ನು ಸೃಷ್ಟಿಸಿತ್ತು.
ಬೈಂದೂರು ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಇಂದು ಬೆಳಗ್ಗೆ ಬೆಂಕಿಯದ್ದೇ ಸದ್ದು. ಒಂದೆರಡಲ್ಲ ಹತ್ತಕ್ಕೂ ಹೆಚ್ಚು ಬೋಟುಗಳಿಗೆ ಹಠಾತ್ ಬೆಂಕಿ ಹತ್ತಿಕೊಂಡಿದ್ದು, ಸಮುದ್ರ ಬದಿಯಲ್ಲಿ ಗಾಳಿಯೊಂದಿಗೆ ಬೆಂಕಿ ಸರಸವಾಡಿದಂತಿತ್ತು. ಇಷ್ಟಕ್ಕೂ ಬೆಂಕಿ ಬೀಳೋದಕ್ಕೆ ಅಲ್ಲಿಯೇ ದೀಪಾವಳಿ ಪಟಾಕಿ ಸಿಡಿಸುತ್ತಿದ್ದ ಬಿಹಾರ ಮೂಲದ ಕಾರ್ಮಿಕರು ಕಾರಣವಂತೆ. ಕಾರ್ಮಿಕರು ಹಾರಿಸಿದ್ದ ಪಟಾಕಿಯ ಕಿಡಿ ನೇರವಾಗಿ ಬೋಟು ಮೇಲಕ್ಕೆ ಬಿದ್ದಿದೆ. ಬೋಟನ್ನು ತೀರಕ್ಕೆ ತಂದು ಮೇಲ್ಗಡೆ ತೆಂಗಿನ ಗರಿಯನ್ನು ಮುಚ್ಚಲಾಗಿತ್ತು. ತೆಂಗಿನ ಗರಿಗಳು ಬಿಸಿಲಿಗೆ ಒಣಗಿದ್ದರಿಂದ ಪಟಾಕಿಯ ಬಾಣದ ಬಿರುಸಿಗೆ ಬೆಂಕಿಯ ಜ್ವಾಲೆ ಏಳುವಂತೆ ಮಾಡಿತ್ತು. ಗಾಳಿಯಿಂದಾಗಿ ಬೆಂಕಿ ಅಕ್ಕಪಕ್ಕದಲ್ಲಿ ಹರಡಿದ್ದು ಅಲ್ಲಿ ನಿಲ್ಲಿಸಿದ್ದ ಹನ್ನೊಂದು ಬೋಟುಗಳಿಗೂ ಹರಡಿದೆ. ಧಗ ಧಗನೆ ಹೊತ್ತಿಕೊಂಡಿದ್ದು, ಅಲ್ಲಿಯೇ ನಿಲ್ಲಿಸಿದ್ದ ಎರಡು ಬೈಕ್ ಕೂಡ ಹೊತ್ತಿ ಉರಿದು ಹೋಗಿದೆ.
ದೀಪಾವಳಿ ನಿಮಿತ್ತ ಕಾರ್ಮಿಕರು ರಜೆಯಲ್ಲಿದ್ದರೆ, ಮೀನುಗಾರರು ಬೋಟನ್ನು ನಿಲ್ಲಿಸಿ ತಮ್ಮ ಮನೆಗೆ ತೆರಳಿದ್ದರು. ಬೆಂಕಿ ಬಿದ್ದ ಕೂಡಲೇ ಅಗ್ನಿಶಾಮಕ ದಳ, ಸ್ಥಳೀಯರು ಸೇರಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಸುದೀರ್ಘ ನಾಲ್ಕು ಗಂಟೆಗಳ ಬಳಿಕ ಬೆಂಕಿಯನ್ನು ನಂದಿಸಲಾಗಿದೆ. ಬೆಂಕಿ ಅನಾಹುತದಿಂದ ಸುಮಾರು 5 ಕೋಟಿಗೂ ಹೆಚ್ಚು ನಷ್ಟ ಅಂದಾಜಿಸಲಾಗಿದೆ.
Kundapur Eight boats go up in flames after fire breaks out in harbour. Eight boats that were anchored on the river bank, were gutted in a fire mishap on Monday November 13 at Manganese Road of Gangolli. The loss is estimated to run into crore of rupees.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm