ಬ್ರೇಕಿಂಗ್ ನ್ಯೂಸ್
13-11-23 10:24 pm Mangalore Correspondent ಕರಾವಳಿ
ಬೆಳ್ತಂಗಡಿ, ನ.13: ಬಿಜೆಪಿ ಯುವಮೋರ್ಚಾ, ಬೆಳ್ತಂಗಡಿ ಬಿಜೆಪಿ ಮಂಡಲ ಇದರ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣ ವಠಾರದಲ್ಲಿ ದೀಪಾವಳಿ ಪ್ರಯುಕ್ತ 4ನೇ ವರ್ಷದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಜನರು ಸೇರಿ ವಿವಿಧ ಮಾದರಿಯ ದೋಸೆಗಳನ್ನು ಸವಿದರು.
ಇದೇ ವೇಳೆ, ಗೋವಿಗೆ ದೋಸೆಯನ್ನು ತಿನ್ನಿಸಿ ಗೋಪೂಜೆಯನ್ನೂ ಮಾಡಲಾಯಿತು. ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೂ ನಡೆದಿದ್ದು ಆಕರ್ಷಣೆ ಪಡೆಯಿತು. ಇದೇ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬೃಜೇಶ್ ಚೌಟ ಸೇರಿದಂತೆ ಪ್ರಮುಖರಿದ್ದರು.
ಸಂಸದ ನಳಿನ್ ಕುಮಾರ್ ಮಾತನಾಡಿ, ಬೆಳ್ತಂಗಡಿಯಂತಹ ಗ್ರಾಮಾಂತರ ಭಾಗದಲ್ಲಿ ಇಂತಹ ಸಾಮೂಹಿಕ ದೀಪಾವಳಿ ಹಬ್ಬವನ್ನು ಆಯೋಜಿಸಿದ ಹರೀಶ್ ಪೂಂಜಾರವರು ಈ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ಹಿಂದೂ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಪೋಷಿಸಿಕೊಂಡು ಹೋಗುವಲ್ಲಿ ಇಂತಹ ಕಾರ್ಯಕ್ರಮಗಳು ಬಹಳ ಮಹತ್ವ ಪಡೆದಿವೆ ಎಂದರು.
ನರೇಂದ್ರ ಮೋದಿ ಈ ದೇಶಕ್ಕೆ ಪ್ರಧಾನ ಮಂತ್ರಿ ಆದ ಬಳಿಕ ಹಿಂದೂ ಸಂಸ್ಕ್ರತಿ ಬೆಳಗುತ್ತಿದೆ. ಹಲವು ಪುಣ್ಯಕ್ಷೇತ್ರಗಳು, ಪುಣ್ಯ ನದಿಗಳನ್ನು ಅಭಿವೃದ್ಧಿ ಪಡಿಸಿ ಸಾಂಸ್ಕೃತಿಕ, ಧಾರ್ಮಿಕ ಪರಂಪರೆಯನ್ನು ಮೇಲೆತ್ತಿ ಇಡೀ ವಿಶ್ವ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ ಜನವರಿಯಲ್ಲಿ ಅಯೋಧ್ಯೆಗೆ ಪ್ರಭು ಶ್ರೀರಾಮಚಂದ್ರನ ಆಗಮನವಾಗುತ್ತಿದ್ದು ಇದರೊಂದಿಗೆ ಇಡೀ ಭಾರತ ದೇಶದ ಸಂಸ್ಕೃತಿ, ಧಾರ್ಮಿಕ ಭಾವನೆ, ನಂಬಿಕೆಗಳು ಉತ್ತುಂಗಕ್ಕೆ ಹೋಗುತ್ತಿದೆ. ಇಲ್ಲಿನ ರಾಜ್ಯ ಸರ್ಕಾರ ಹಿಂದುಗಳ ಗಣಪತಿ ಹಬ್ಬಕ್ಕೆ, ದೀಪಾವಳಿಗೆ ಹಲವು ನಿರ್ಬಂಧಗಳನ್ನು ಹಾಕುವುದನ್ನು ಕಂಡಿದ್ದೇವೆ. ಇವೆಲ್ಲವನ್ನು ಹಿಂದೂ ಸಮಾಜ ಮೆಟ್ಟಿ ನಿಲ್ಲುವ ಅನಿವಾರ್ಯತೆ ಬಂದಿದೆ. ಇಂತಹ ಸಾಮೂಹಿಕ ದೀಪಾವಳಿಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರೊಂದಿಗೆ ಭಾರತೀಯ ಜನತಾ ಪಾರ್ಟಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ ಎಂದು ನಳಿನ್ ಹೇಳಿದರು.
Belthangady dosa festival held With prayer and pooja.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm