ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm