ಬ್ರೇಕಿಂಗ್ ನ್ಯೂಸ್
14-11-23 01:04 pm Mangalore Correspondent ಕರಾವಳಿ
ಮಂಗಳೂರು,ನ.14: ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಹಿರಿಯ ಅಧಿಕಾರಿಯಾಗಿದ್ದ ವಾದಿರಾಜ್ ಕೆ.ಎ.(51) ಆತ್ಮಹತ್ಯೆ ಪ್ರಕರಣದ ಬಗ್ಗೆ ನಾನಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು ಇದರ ಹಿಂದೆ ಬ್ಯಾಂಕ್ ಅಧಿಕಾರಿಗಳ ಕಿರುಕುಳವೇ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.
ಬ್ಯಾಂಕ್ ಅಧಿಕಾರಿಯಾಗಿದ್ದವರು ದಿಢೀರ್ ಆಗಿ ಕುತ್ತಿಗೆಯನ್ನು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ನಾನಾ ರೀತಿಯ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ವಾದಿರಾಜ್ ಆತ್ಮಹತ್ಯೆ ಬಗ್ಗೆ ಪತ್ನಿ ಶಂಕೆ ವ್ಯಕ್ತಪಡಿಸಿದ್ದು ಬ್ಯಾಂಕ್ ಹಿರಿಯ ಅಧಿಕಾರಿಗಳ ಕಿರುಕುಳ, ಮಾನಸಿಕ ಒತ್ತಡ ಕಾರಣ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



ಇದೇ ವೇಳೆ, ಬ್ಯಾಂಕಿನಲ್ಲಿ ಡಿಜಿಎಂ ಶ್ರೇಣಿಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಹಿರಿಯ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ತನಿಖೆಯ ತೂಗುಗತ್ತಿ ಇವರ ಕುತ್ತಿಗೆಗೆ ಬರುವ ಸಾಧ್ಯತೆ ಇದೆಯೆಂದು ಒಟ್ಟು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಬ್ಯಾಂಕಿನ ಅಧಿಕಾರಿಗಳು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆತ್ಮಹತ್ಯೆ ಪ್ರಕರಣದಲ್ಲಿ ಬ್ಯಾಂಕ್ ಕೈವಾಡ ಇಲ್ಲವೆಂಬಂತೆ ಬಿಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನ ಪಂಪ್ವೆಲ್ ನಲ್ಲಿರುವ ಪ್ರಧಾನ ಕಚೇರಿಯಲ್ಲಿ ಸಿಸಿಓ ಹುದ್ದೆಯಲ್ಲಿ ಅಧಿಕಾರಿಯಾಗಿದ್ದ ವಾದಿರಾಜ್, ಬ್ಯಾಂಕಿನ ವ್ಯವಹಾರದಲ್ಲಿ ಉತ್ತಮ ಅಧಿಕಾರಿಯಾಗಿದ್ದರು. ಇವರು ಆತ್ಮಹತ್ಯೆ ಮಾಡಿಕೊಂಡಿದ್ದೇ ಆಗಿದ್ದಲ್ಲಿ ಡೆತ್ ನೋಟ್ ಬರೆದಿರುವ ಸಾಧ್ಯತೆ ಹೆಚ್ಚಿದ್ದು, ಆದರೆ ಅದು ಪೊಲೀಸರಿಗೆ ಸಿಕ್ಕಿದೆಯೇ ಅಥವಾ ಸಿಗದಂತೆ ಮುಚ್ಚಿ ಹಾಕಿದ್ದಾರೆಯೇ ಎಂಬ ಅನುಮಾನ ಉಂಟಾಗಿದೆ. ಕಂಕನಾಡಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka bank manager suicide in Mangalore, senior officers harrassment reason.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm