ಬ್ರೇಕಿಂಗ್ ನ್ಯೂಸ್
14-11-23 07:42 pm Mangalore Correspondent ಕರಾವಳಿ
ಉಳ್ಳಾಲ, ನ.14: ಸಹೋದ್ಯೋಗಿಗೆ ಹಲ್ಲೆಗೈದು ಹಲ್ಲುಗಳನ್ನ ಉದುರಿಸಿ ಎಸ್ಕೇಪ್ ಆಗಿದ್ದ ಕುಂಪಲದ ಸೈಕೋ ರಿಕ್ಷಾ ಚಾಲಕನನ್ನ ಉಳ್ಳಾಲ ಪೊಲೀಸರು 24 ಗಂಟೆಗಳೊಳಗೆ ಬಂಧಿಸಿ ಜೈಲಿಗಟ್ಟಿದ್ದಾರೆ.
ಕಳೆದ ಆದಿತ್ಯವಾರ ಸಂಜೆ ಕುಂಪಲ ಬೈಪಾಸ್ ಆಟೋ ರಿಕ್ಷಾ ಪಾರ್ಕಿನಲ್ಲಿದ್ದ ರಿಕ್ಷಾ ಚಾಲಕ ಸುಶಾಂತ್(31) ಎಂಬವರಿಗೆ ಅದೇ ಪಾರ್ಕಿನಲ್ಲಿ ರಿಕ್ಷಾ ಚಾಲನೆ ಮಾಡುತ್ತಿರುವ ರೋಕೇಶ್(37) ಯಾನೆ ಸೈಕೋ ರೋಸ್ ಎಂಬಾತ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಮುಖಕ್ಕೆ ಬಲವಾಗಿ ಥಳಿಸಿದ ಪರಿಣಾಮ ಸುಶಾಂತ್ ಅವರ ಎರಡು ಹಲ್ಲುಗಳು ಉದುರಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಸುಶಾಂತ್ ರವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು ಹಲ್ಲೆಗೈದ ಆರೋಪಿ ರೋಕೇಶ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಠಾಣೆಯಲ್ಲಿ ತನ್ನ ವಿರುದ್ದ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ರೋಕೇಶ್ ತಲೆಮರೆಸಿಕೊಂಡಿದ್ದ.
ಉಳ್ಳಾಲ ಪೊಲೀಸ್ ಠಾಣೆಯ ಪಿಐ ಬಾಲಕೃಷ್ಣ ರವರು ಸೋಮವಾರವೇ ತನ್ನ ಸಿಬ್ಬಂದಿಗಳೊಂದಿಗೆ ಅತೀ ಶೀಘ್ರವಾಗಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಜೈಲಿಗಟ್ಟಿದ್ದಾರೆ.
ಬಂಧಿತ ಆರೋಪಿ ರೋಕೇಶ್ ಯಾನೆ ಸೈಕೊ ರೋಸ್ ಕುಂಪಲ ನಿವಾಸಿಯಾಗಿದ್ದು ಅಮಲು ಪದಾರ್ಥಗಳಿಗೆ ದಾಸನಾಗಿ ಪ್ರದೇಶಕ್ಕೆ ಕಂಟಕಪ್ರಾಯನಾಗಿದ್ದ. ಈತನ ವಿರುದ್ದ ಉಳ್ಳಾಲ ಠಾಣೆಯಲ್ಲಿ ಈ ಹಿಂದೆಯೂ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಸ್ಥಳೀಯ ಹೆಣ್ಮಕ್ಕಳಿಗೆ ಲೈಗಿಂಕ ಕಿರುಕುಳ ನೀಡಿ ಸಾರ್ವಜನಿಕರಿಂದ ಶಾಸ್ತಿ ಮಾಡಿಸಿಕೊಂಡಿದ್ದ. ಆರೋಪಿಯ ಸಹೋದರ ವೃತ್ತಿಪರ ವಕೀಲನಾಗಿದ್ದು ಆತನ ಧೈರ್ಯದಿಂದಲೇ ಸೈಕೋ ರೋಸ್ ನಿರಂತರ ಅಪರಾಧ ಕೃತ್ಯ ಎಸಗುತ್ತಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ದಿನ ನಿತ್ಯವೂ ನಶೆಯಲ್ಲೇ ರಿಕ್ಷಾ ಚಾಲನೆ ನಡೆಸುತ್ತಿರುವ ರೋಕೇಶನ ನಡವಳಿಕೆಯ ಬಗ್ಗೆ ಬೈಪಾಸಿನ ರಿಕ್ಷಾ ಚಾಲಕರು, ಮಾಲಕರೇ ಒಟ್ಟಾಗಿ ಉಳ್ಳಾಲ ಠಾಣೆಗೆ ಬರವಣಿಗೆಯಲ್ಲಿ ಮಾಹಿತಿ ಕೊಟ್ಟಿದ್ದು ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದರು.
Auto driver assults driver at auto stand at Kumpala in Mangalore, arrested within hours by Ullal Police.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 08:22 pm
Mangalore Correspondent
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm