ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.

ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm