ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.
ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm