ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.

ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm