ಬ್ರೇಕಿಂಗ್ ನ್ಯೂಸ್
17-11-23 01:37 pm Udupi Correspondent ಕರಾವಳಿ
ಉಡುಪಿ, ನ.17: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಕೃತ್ಯವನ್ನು ಸಂಭ್ರಮಿಸಿ ಪೋಸ್ಟ್ ಹಾಕಲಾಗಿದ್ದು ಈ ಕುರಿತು ಇನ್ಸ್ ಟಾ ಗ್ರಾಮ್ ಪೇಜ್ ವಿರುದ್ದ ಉಡುಪಿ ಸೈಬರಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನವೆಂಬರ್ 12 ರಂದು ಮಹಾರಾಷ್ಟ್ರ ಮೂಲದ ಆರೋಪಿ ಪ್ರವೀಣ್ ಚೌಗುಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಕೃತ್ಯ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಕೃತ್ಯ ನಡೆದ ಮೂರೇ ದಿನಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಈ ನಡುವೆ, ಕಿಡಿಗೇಡಿಗಳು ಈ ಹತ್ಯಾಕಾಂಡವನ್ನು ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮಿಸಿ ಪೋಸ್ಟ್ ಮಾಡುತ್ತಿರುವುದು ಪತ್ತೆಯಾಗಿದೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ‘ಹಿಂದು ಮಂತ್ರ’ ಎಂಬ ಪೇಜ್ನಲ್ಲಿ ಕೊಲೆ ಆರೋಪಿಯನ್ನು ಸಾಧನೆ ಮಾಡಿರುವಂತೆ ಬಿಂಬಿಸಿ ಪೋಸ್ಟ್ ಹಾಕಲಾಗಿದೆ. ‘ಹಿಂದು ಮಂತ್ರ’ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ‘‘15 ನಿಮಿಷದಲ್ಲಿ 4 ಮುಸ್ಲಿಮರನ್ನು ಕೊಂದು ವಿಶ್ವ ದಾಖಲೆ ನಿರ್ಮಿಸಿದ್ದಾನೆ’’ ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಫೋಟೋಗೆ ‘ಕಿರೀಟ’ ತೊಡಿಸಿ ವಿಕೃತಿ ಮೆರೆಯಲಾಗಿದೆ.

ತಮ್ಮ ಕೃತ್ಯಕ್ಕೂ ಸಮರ್ಥನೆ ನೀಡಿರುವ ಕಿಡಿಗೇಡಿಗಳು ‘ಉಡುಪಿ ಹುಡುಗಿಯರ ವಿಚಾರದಲ್ಲಿ ಯಾರೂ ಬಂದಿಲ್ಲ. ಆದ್ದರಿಂದ, ನಾವೂ ಈ ವಿಚಾರಕ್ಕೆ ಬರುವುದಿಲ್ಲ’ ಎಂದು ಬರೆಯಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಇದಲ್ಲದೆ ಈ ‘ಹಿಂದು ಮಂತ್ರ’ ಇನ್ಸ್ಟಾಗ್ರಾಂ ಖಾತೆಯಲ್ಲಿ ಮುಸ್ಲಿಮ್ ಮಹಿಳೆಯರನ್ನು ಅವಹೇಳನ ಮಾಡುವ ರೀತಿಯ ಫೋಟೊ, ವಿಡಿಯೋಗಳನ್ನು ಹಂಚಿಕೊಂಡು ಶಾಂತಿ ಕದಡಲು ಯತ್ನಿಸಿದ ಹಲವು ಪೋಸ್ಟ್ಗಳನ್ನು ಹಾಕಲಾಗಿದೆ.
Udupi murder case, Instagram page Hindu Mantra celebrates murder, case filed at cyber crime.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm