ಬ್ರೇಕಿಂಗ್ ನ್ಯೂಸ್
18-11-23 01:29 pm Mangalore Correspondent ಕರಾವಳಿ
ಸುಳ್ಯ, ನ.18: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಬರೆದು ಜಾಲತಾಣದಲ್ಲಿ ಹಂಚಿರುವುದು ಹಾಗೂ ಗರ್ಭಗುಡಿಯ ಫೋಟೊ ತೆಗೆದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವರ್ಗದವರು ಹಾಗೂ ಒಳಾಂಗಣ ನೌಕರರು ಪೊಲೀಸರಿಗೆ ದೂರು ನೀಡಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗುಡಿಯ ಫೋಟೋ ತೆಗೆಯಲು ನಿಷೇಧವಿದ್ದರೂ ಕುಲ್ಕುಂದದ ವ್ಯಕ್ತಿಯೊಬ್ಬರು ಗರ್ಭಗುಡಿಯ ಫೋಟೋ ತೆಗೆದಿದ್ದಾರೆ. ಅಲ್ಲದೆ, ಈ ಫೋಟೋವನ್ನು ಕುಕ್ಕೆ ಶ್ರೀ ದೇವಾಲಯ ಉಳಿಸಿ, ಶೈವಾಗಮ ಕ್ಷೇತ್ರ ಶ್ರೀ ಕುಕ್ಕೆ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇದಲ್ಲದೆ ಅರ್ಚಕರು, ಪುರೋಹಿತರನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳನ್ನು, ನಿಂದನಾತ್ಮಕವಾಗಿ ಬರೆದು ಇಲ್ಲಿನ ಅರ್ಚಕರನ್ನು ತೇಜೋವಧೆ ಮಾಡುವ ಬರಹಗಳನ್ನು ಬರೆದಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ತುಪ್ಪ ಕಳವು ಆಗುತ್ತಿದೆಯೆಂಬ ಆರೋಪ
ದೇವಸ್ಥಾನದಲ್ಲಿ ತುಪ್ಪ ಕಳವಾಗುತ್ತಿರುವ ಬಗ್ಗೆ ಮೂರು ಬಾರಿ ದೂರು ಕೊಟ್ಟರೂ ಕಮಿಷನ್ ಆಸೆಯಿಂದ ಕಾರ್ಯ ನಿರ್ವಹಣಾಧಿಕಾರಿ ಪೊಲೀಸರಿಗೆ ದೂರು ನೀಡಿಲ್ಲ, ಕದ್ದ ತುಪ್ಪದಲ್ಲಿ ಅವರಿಗೂ ಪಾಲು ಇರಬಹುದು ಎಂಬ ಬರಹಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.
ಈ ಬಗ್ಗೆ ದೇಗುಲದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಿಂಗಯ್ಯ ಪ್ರತಿಕ್ರಿಯಿಸಿದ್ದು, ವಾಟ್ಸಪ್ ನಲ್ಲಿ ಹರಿದಾಡಿದ ವಿಚಾರ ನನ್ನ ಗಮನಕ್ಕೂ ಬಂದಿದೆ, ನಮ್ಮ ಆಡಳಿತ ಸಮಿತಿಯಿಂದಲೂ ದೂರು ನೀಡಲಾಗಿದೆ ಎಂದಿದ್ದಾರೆ.
A complaint has been registered at the Subrahmanya police station against a person for allegedly writing an abusive article about the priest of the Kukke Subrahmanya temple and sharing it on the internet and taking a photograph of the sanctum sanctorum.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm