ಬ್ರೇಕಿಂಗ್ ನ್ಯೂಸ್
18-11-23 06:14 pm Udupi Correspondent ಕರಾವಳಿ
ಉಡುಪಿ, ನ.18: ಸ್ಪೀಕರ್ ಸ್ಥಾನ ಎಂಬುದು ಸಾಂವಿಧಾನಿಕ ಹುದ್ದೆ. ಆ ಹುದ್ದೆಯ ಗೌರವ ಹಾಳು ಮಾಡುವ ಕೆಲಸ ಮಾಡಬೇಡಿ. ನಾವು ಮುಲ್ಲಾಗೆ ಸಲಾಂ ಹೊಡೆಯುತ್ತಿಲ್ಲ. ಸಂವಿಧಾನದ ಬಗ್ಗೆ ಅರ್ಥ ಆಗದ ನಿಮ್ಮಂಥವರು ಸಚಿವರಾದರೆ ಹೀಗೆಯೇ ಆಗೋದು ಎಂದು ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸ್ಪೀಕರ್ ಯುಟಿ ಖಾದರ್ ಘನತೆಯನ್ನು ಹಾಳು ಮಾಡಬೇಡಿ, ನಾವು ಮುಲ್ಲಾ ಎಂದು ಗೌರವ ನೀಡೋದಿಲ್ಲ. ಸ್ಪೀಕರ್ ಎಂಬ ಹುದ್ದೆಗೆ ಗೌರವ ನೀಡುತ್ತೇವೆ ಎಂದು ಸಚಿವ ಜಮೀರ್ ಅಹ್ಮದ್ಗೆ ಮಾತಿನಿಂದಲೇ ತಿವಿದಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಗೆ ಅಸಮಾಧಾನ ಇದೆಯೇ ಎಂದು ಕೇಳಿದ ಪ್ರಶ್ನೆಗೆ, ನಾನು ರಾಜ್ಯಾಧ್ಯಕ್ಷ ಹುದ್ದೆಯ ರೇಸ್ನಲ್ಲಿ ಇಲ್ಲ ಎಂದು ಮೂರು ತಿಂಗಳ ಹಿಂದೆಯೇ ಸ್ಪಷ್ಟಪಡಿಸಿದ್ದೆ. ರೇಸಲ್ಲೇ ಇಲ್ಲ ಅಂದ ಮೇಲೆ ಬೇಸರದ ಪ್ರಶ್ನೆ ಬರಲ್ಲ. ಜವಾಬ್ದಾರಿ ಯಾವಾಗ ಯಾರಿಗೆ ಕೊಡಬೇಕು ಎಂದು ವರಿಷ್ಠರು ತೀರ್ಮಾನಿಸುತ್ತಾರೆ. ನಾವೆಲ್ಲರೂ ತಂಡವಾಗಿ ಕೆಲಸ ಮಾಡುತ್ತೇವೆ, ಹುದ್ದೆಯ ಬಗ್ಗೆ ಚರ್ಚೆ ಮಾಡಲು ಬಯಸಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಕರ ಆಯ್ಕೆಯಲ್ಲಿ ಯಾವ ಭಾಗ ಎಂಬುದು ಬರಲ್ಲ. ಉತ್ತರ ಕರ್ನಾಟಕದವರಾದ ಬೊಮ್ಮಾಯಿ ಎರಡು ವರ್ಷ ಸಿಎಂ ಆಗಿದ್ದರು. ವಿಪಕ್ಷ ನಾಯಕನ, ರಾಜ್ಯಾಧ್ಯಕ್ಷರ ಆಯ್ಕೆ ಸಮಗ್ರ ಕರ್ನಾಟಕಕ್ಕೆ ನಡೆದ ಆಯ್ಕೆಯಾಗಿದೆ. ರಾಜ್ಯ ಬಿಜೆಪಿಗೆ ನಾಯಕನನ್ನು ಆಯ್ಕೆ ಮಾಡಲಾಗಿದೆ. ಅಶೋಕ ಸಮರ್ಥ ವಿಪಕ್ಷ ನಾಯಕನಾಗಿ ಎಲ್ಲಾ ಟೀಕೆಗೆ ಉತ್ತರಿಸುತ್ತಾರೆ. ನಮ್ಮ ಕೇಂದ್ರ ನಾಯಕರಾದ ನಿರ್ಮಲಾ ಸೀತಾರಾಮನ್, ದುಷ್ಯಂತ್ ಕುಮಾರ್ ನಮ್ಮೆಲ್ಲರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ನಮ್ಮೆಲ್ಲ ಶಾಸಕರ ಜೊತೆ ಮಾತನಾಡಿ ನಿರ್ಣಯ ಮಾಡಿದ್ದಾರೆ ಎಂದು ಸಿಟಿ ರವಿ ಹೇಳಿದರು.
Zameer ahmed Muslim Speaker Remark Triggers Controversy, Ct Ravi slams statement.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm