ಬ್ರೇಕಿಂಗ್ ನ್ಯೂಸ್
22-11-23 02:26 pm Mangalore Correspondent ಕರಾವಳಿ
ಮಂಗಳೂರು, ನ.22: ಬೆಳಗಾವಿ ಅಧಿವೇಶನ ಬಳಿಕ ಕಾಂಗ್ರೆಸ್ನಲ್ಲಿ ದೊಡ್ಡ ಪರಿವರ್ತನೆಯಾಗಲಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ ಹೊರಗೆ ಬರುತ್ತಾರೆ ಎಂದು ಬಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಗಳವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, " ಕಾಂಗ್ರೆಸ್ನೊಳಗೆ ಆಂತರಿಕ ಗೊಂದಲ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಪ್ರತ್ಯೇಕವಾಗಿ ಇಬ್ಭಾಗವಾಗುತ್ತಿದೆ. ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿಯಾಗುವ ಬೇಡಿಕೆ ಇಡುತ್ತಿದಾರೆ. ಕಾಂಗ್ರೆಸ್ ಡಿವೈಡ್ ಆಗುತ್ತಿದ್ದು ಹಸ್ತದೊಳಗೆ ಹಸ್ತದ ಆಪರೇಷನ್ ಆಗುತ್ತಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ನ 30-40 ಶಾಸಕರು ಬಿಜೆಪಿಗೆ ಬರಲಿದ್ದಾರೆ. ಇದೇ ಭಯದಿಂದ ಕಾಂಗ್ರೆಸ್ನವರು ಬಿಜೆಪಿಯಿಂದ ಬರುತ್ತಿದ್ದಾರೆ ಎಂದು ದಾರಿ ತಪ್ಪಿಸುತ್ತಿದ್ದಾರೆ. ಆದರೆ, ಯಾವುದೇ ಕಾರಣಕ್ಕೆ ಬಿಜೆಪಿಯಿಂದ ಯಾರೂ ಹೋಗುತ್ತಿಲ್ಲ. ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಕಾಂಗ್ರೆಸ್ನಲ್ಲಿ ದೊಡ್ಡ ಪರಿವರ್ತನೆಯಾಗುತ್ತದೆ. ಸಿಎಂ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ. ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹಾಕುತ್ತಿದ್ದಾರೆ. ಇತ್ತ ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಸಿಎಂ ಸ್ಥಾನಕ್ಕೆ ಮುಗಿಬಿದ್ದಿದ್ದಾರೆ. ಈ ಕಾರಣ ಸರ್ಕಾರ ಬೀಳಬಹುದು ಎಂದರು.
ಸರ್ಕಾರದಿಂದ ಅಭಿವೃದ್ಧಿ ಆಗುತ್ತಿಲ್ಲ ;
ರಾಜ್ಯ ಸರ್ಕಾರ ಟೇಕಾಫ್ ಆಗುತ್ತಿಲ್ಲ, ಅಭಿವೃದ್ಧಿ ಕಾರ್ಯ ಆಗುತ್ತಿಲ್ಲ. ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ. ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ. ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ, ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನವಾಗುತ್ತಿಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ ಎಂದು ಕಿಡಿಕಾರಿದರು.
ಮೋದಿ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ ;
ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ. ರಾಜ್ಯದಿಂದ ಒಂದು ರೂಪಾಯಿ ಬಿಡಿಗಾಸು ಬಿಡಗಡೆಯಾಗಿಲ್ಲ. ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣವಿಲ್ಲ. ಮೂರ್ನಾಲ್ಕು ತಿಂಗಳು ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
30 to 40MLAs to leave Congress very soon says MP Nalin Kumar Kateel in Mangalore. Internal tussle has increased in the Congress. The groups of Siddaramaiah, D K Shivakumar and Satish Jarkiholi are getting divided. Around 30 to 40 MLAs will desert the Congress within a few days,” said MP Nalin Kumar Kateel.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm