ಬ್ರೇಕಿಂಗ್ ನ್ಯೂಸ್
23-11-23 06:15 pm Mangalore Correspondent ಕರಾವಳಿ
ಮಂಗಳೂರು, ನ.23: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರಕಾರವು ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಅಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆಯೇ ಜಿಲಾಧಿಕಾರಿಯವರ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢ ಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಈ ಮೂಲಕ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ರಾಜ್ಯ ಸರಕಾರ ಕಡೆಗಣಿಸುತ್ತಿದೆ. ಇದು ರಾಜ್ಯ ಸರಕಾರದ ಖಂಡನೀಯ ನಡೆಯಾಗಿದೆ. ಇದರಿಂದ ಪದವಿ ಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಅದು ಎಲ್ಲರನ್ನೂ ಒಳ್ಳಗೊಂಡು ಸರ್ವ ಸಮ್ಮತದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಅದನ್ನು ಒಳಗೊಳ್ಳುವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಈ ಬಗ್ಗೆ ತೆಗೆದುಕೊಂಡ ಎಲ್ಲಾ ಪ್ರಕ್ರಿಯಗಳನ್ನು ನಿಲ್ಲಿಸಿ ತಕ್ಷಣವೇ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಪ್ರತಿನಿಧಿಗಳು, ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಯನ್ನು ಕರೆದು ಚರ್ಚಿಸಿ ಒಮ್ಮತದಿಂದ ತೀರ್ಮಾನಿಸಲು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
Mangalore University Former syndicate member S R Harish Acharya requests for post graduation education department to be under GIP.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm