ಬ್ರೇಕಿಂಗ್ ನ್ಯೂಸ್
23-11-23 06:15 pm Mangalore Correspondent ಕರಾವಳಿ
ಮಂಗಳೂರು, ನ.23: ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಜಿಲ್ಲಾ ಪಂಚಾಯತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಅಧೀನಕ್ಕೆ ಒಳಪಡಿಸುವಂತೆ ರಾಜ್ಯ ಸರಕಾರವು ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ ಅಗ್ರಹಿಸಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಈ ಹಿಂದಿನಂತೆಯೇ ಜಿಲಾಧಿಕಾರಿಯವರ ಅಧೀನದಲ್ಲಿಯೇ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕೆಂದು ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ( ಪದವಿ ಪೂರ್ವ) ಇಲಾಖೆ ಎಂದು ಬದಲಾಯಿಸಿ ಪ್ರೌಢ ಶಾಲಾ ವಿಭಾಗದಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವಿಲೀನಗೊಳಿಸಲಾಗಿದೆ. ಈ ಮೂಲಕ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನೇ ರಾಜ್ಯ ಸರಕಾರ ಕಡೆಗಣಿಸುತ್ತಿದೆ. ಇದು ರಾಜ್ಯ ಸರಕಾರದ ಖಂಡನೀಯ ನಡೆಯಾಗಿದೆ. ಇದರಿಂದ ಪದವಿ ಪೂರ್ವ ಕಾಲೇಜಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಧ್ಯಾಪಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ಅವರು ವಿವರಿಸಿದ್ದಾರೆ.
ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಗಳು ಏಕಪಕ್ಷೀಯವಾಗಿ ನಡೆಯಬಾರದು. ಅದು ಎಲ್ಲರನ್ನೂ ಒಳ್ಳಗೊಂಡು ಸರ್ವ ಸಮ್ಮತದಿಂದ ಕೂಡಿರಬೇಕು. ಈ ಹಿನ್ನೆಲೆಯಲ್ಲಿ ಅದನ್ನು ಒಳಗೊಳ್ಳುವ ಕಾಲೇಜು ಪ್ರಾಚಾರ್ಯರು, ಉಪನ್ಯಾಸಕರು ಮತ್ತು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಸಮನ್ವಯ ಸಾಧಿಸಿಕೊಂಡು ಮಾಡಬೇಕಾಗಿದೆ. ಆದುದರಿಂದ ರಾಜ್ಯ ಸರಕಾರವು ತಕ್ಷಣವೇ ಈ ಬಗ್ಗೆ ತೆಗೆದುಕೊಂಡ ಎಲ್ಲಾ ಪ್ರಕ್ರಿಯಗಳನ್ನು ನಿಲ್ಲಿಸಿ ತಕ್ಷಣವೇ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಪ್ರತಿನಿಧಿಗಳು, ಉಪನ್ಯಾಸಕರ ಸಂಘದ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಯನ್ನು ಕರೆದು ಚರ್ಚಿಸಿ ಒಮ್ಮತದಿಂದ ತೀರ್ಮಾನಿಸಲು ಕ್ರಮ ಕೈಗೊಳ್ಳಬೇಕೆಂದು ಹರೀಶ್ ಆಚಾರ್ಯ ಹೇಳಿಕೆಯ ಮೂಲಕ ಒತ್ತಾಯಿಸಿದ್ದಾರೆ.
Mangalore University Former syndicate member S R Harish Acharya requests for post graduation education department to be under GIP.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm