ಬ್ರೇಕಿಂಗ್ ನ್ಯೂಸ್
23-11-23 10:14 pm Mangalore Correspondent ಕರಾವಳಿ
ಮಂಗಳೂರು, ನ.23: ಪರಿಶಿಷ್ಟ ಜಾತಿಯ ಗುತ್ತಿಗೆದಾರ ಮಹಿಳೆಯೊಬ್ಬರನ್ನು ಬಿಜೆಪಿ ಕಾರ್ಪೊರೇಟರ್ ರೂಪಶ್ರೀ ಜಾತಿ ಹೆಸರೆತ್ತಿ ನಿಂದಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಸ್ಸಿ ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು ನಗರದ ಸರಿಪಲ್ಲ- ಕನ್ನಗುಡ್ಡೆ ಎಂಬಲ್ಲಿ ಪಿಡಬ್ಲ್ಯುಡಿ ಇಲಾಖೆಯಿಂದ ಕಾಮಗಾರಿ ನಿರ್ವಹಿಸಲು ಅಮಲಾ ಜ್ಯೋತಿ ಎಂಬ ಪರಿಶಿಷ್ಟ ಜಾತಿಯ ಮಹಿಳಾ ಗುತ್ತಿಗೆದಾರರು ಟೆಂಡರ್ ಪಡೆದಿದ್ದರು. ಜುಲೈ 28ರಂದು ಟೆಂಡರ್ ಆಗಿದ್ದು, ಇದರಂತೆ ನ.23ರಂದು ಕನ್ನಗುಡ್ಡದ ನೂಜಿ ಎಂಬಲ್ಲಿ ಕೆಲಸ ನಿರ್ವಹಿಸಲು ಗುತ್ತಿಗೆದಾರರು ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಆಗಿರುವ ರೂಪಶ್ರೀ ಸ್ಥಳಕ್ಕೆ ಬಂದಿದ್ದು ನನ್ನ ಏರಿಯಾದಲ್ಲಿ ಯಾಕೆ ಟೆಂಡರ್ ಹಾಕಿದ್ದೀಯಾ.. ನಿನ್ನ ಜಾತಿಯವರಿಗೆ ಟೆಂಡರ್ ಹಾಕಲು ಬಿಡುವುದಿಲ್ಲ ಎಂದು ಹೀಯಾಳಿಸಿ ಬೈದಿದ್ದಾರೆಂದು ಗುತ್ತಿಗೆದಾರ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರ ಮಧ್ಯೆ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅಲ್ಲದೆ ಈ ಏರಿಯಾದಲ್ಲಿ ಕೆಲಸ ಆರಂಭಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಕಾರ್ಪೊರೇಟರ್ ರೂಪಶ್ರೀ ಜೀವ ಬೆದರಿಕೆ ಹಾಕಿದ್ದಾರೆ. ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೆಂದು ತಿಳಿದಿದ್ದರೂ ಪಿಡಬ್ಲ್ಯುಡಿ ಇಂಜಿನಿಯರ್ ಎದುರಲ್ಲಿ ನಿಂದನೆ ಮಾಡಿದ್ದಾರೆಂದು ದೂರು ನೀಡಿದ್ದಾರೆ.
Mangalore Atrocity case booked against Corporator Roopashree in Mangalore over dispute with SC Contractor at Saripalla.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm