ಬ್ರೇಕಿಂಗ್ ನ್ಯೂಸ್
24-11-23 01:55 pm Mangalore Correspondent ಕರಾವಳಿ
ಮಂಗಳೂರು, ನ.24: ಅಜ್ಜನ ಮರಣ ಪತ್ರ ಮಾಡಿಕೊಡಲು ವ್ಯಕ್ತಿಯೊಬ್ಬರಲ್ಲಿ ಲಂಚ ಕೇಳಿದ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೇಳ್ಯಾರು ಗ್ರಾಮ ಲೆಕ್ಕಿಗ ವಿಜಿತ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. 13,000 ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರಾಪ್ ಮಾಡಿದ್ದಾರೆ. ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಿನಲ್ಲಿದ್ದ 42 ಸೆಂಟ್ಸ್ ಜಾಗದಲ್ಲಿ ಐದು ಸೆಂಟ್ಸ್ ಜಾಗವನ್ನು ಮಾರಾಟ ಮಾಡುವ ಉದ್ದೇಶದಿಂದ ಅಜ್ಜನ ಮರಣ ಪತ್ರ ಮತ್ತು ಸಂತತಿ ನಕ್ಷೆ ಮಾಡಲು ಮುಂದಾಗಿದ್ದರು. ಇದಕ್ಕಾಗಿ ಮಂಗಳೂರು ತಾಲೂಕಿನ ಚೇಳ್ಯಾರು ಗ್ರಾಮದ ಗ್ರಾಮ ಲೆಕ್ಕಿಗ ವಿಜಿತ್ ಬಳಿ ಅರ್ಜಿ ಹಾಕಿದ್ದರು.
ನ.20ರಂದು ಕರೆ ಮಾಡಿದ್ದ ಗ್ರಾಮ ಲೆಕ್ಕಿಗ, ನಿಮ್ಮ ಅಜ್ಜನ ಮರಣ ಪತ್ರ ರೆಡಿಯಾಗಿದೆ, 15 ಸಾವಿರ ಹಿಡಿದುಕೊಂಡು ಬನ್ನಿ ಎಂದು ಹೇಳಿದ್ದರು. ಆದರೆ ತನ್ನಲ್ಲಿ ಅಷ್ಟು ಹಣ ಇಲ್ಲವೆಂದು ಹೇಳಿದಾಗ, ನಾಳೆಯಾದರೂ ತಗೊಂಡು ಬನ್ನಿ ಎಂದಿದ್ದರು. ಕೊನೆಗೆ 13 ಸಾವಿರ ಹಣ ಕೊಡಿ, ಸುರತ್ಕಲ್ ನಾಡ ಕಚೇರಿಗೆ ತಂದುಕೊಡಿ ಎಂದು ಹೇಳಿದ್ದರು. ಈ ಬಗ್ಗೆ ಫಿರ್ಯಾದಿದಾರ, ಲೋಕಾಯುಕ್ತಕ್ಕೆ ದೂರು ನೀಡಿದ್ದು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಗ್ರಾಮ ಲೆಕ್ಕಿಗ ಹಣ ಪಡೆಯುತ್ತಿದ್ದಾಗಲೇ ಅರೆಸ್ಟ್ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸೈಮನ್ ಹಾಗು ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದರು.
Mangalore Chelairu Surathkal gram Panchyath accountant arrested by Lokayukta for bribe over death certificate.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm