ಬ್ರೇಕಿಂಗ್ ನ್ಯೂಸ್
24-11-23 02:56 pm Mangalore Correspondent ಕರಾವಳಿ
ಮಂಗಳೂರು, ನ.24: ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ವಾಪಸ್ ಪಡೆದ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅಡ್ವೊಕೇಟ್ ಜನರಲ್ ಗೆ ಕಳೆದ ಬಾರಿ ಯಡಿಯೂರಪ್ಪ ಸರ್ಕಾರ ಇದ್ದಾಗ ಮೌಖಿಕ ಆದೇಶ ಕೊಟ್ಟಿದ್ದರು. ಮೌಖಿಕ ಆದೇಶ ಕೊಡೋದು ತಪ್ಪು ಅನ್ನೋದು ಆಗಿನ ಎಜಿ ಮತ್ತು ಈಗಿನ ಎಜಿ ಶಶಿಕಿರಣ್ ಶೆಟ್ಟಿ ಅಭಿಪ್ರಾಯ. ಆ ಪ್ರಕಾರ ಈಗ ಕೊಟ್ಟ ಅನುಮತಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸಿಬಿಐ ಸುಪ್ರೀಂ ಅಥವಾ ಹೈಕೋರ್ಟ್ ಹೋಗೋದು ಅವರಿಗೆ ಬಿಟ್ಟಿದ್ದು. ಆಗಿನ ಸರ್ಕಾರ ಮಾಡಿರೋದು ತಪ್ಪು ಅಂತ ಎಜಿ ವರದಿ ಕೊಟ್ಟಿದ್ದಾರೆ. ಹೀಗಾಗಿ ಕ್ಯಾಬಿನೆಟ್ ಗೂ ಅದು ತಪ್ಪು ಅಂತ ಅನಿಸಿ ವಾಪಸ್ ತೆಗೊಂಡಿದೆ. ಬಿಜೆಪಿಯವರು ಪ್ರಾಮಾಣಿಕರಾಗಿದ್ದರೆ ಎಜಿ ಅಭಿಪ್ರಾಯ ಕೇಳಿ ತನಿಖೆಗೆ ಕೊಡಬೇಕಿತ್ತು. ಎಜಿ ಅಭಿಪ್ರಾಯ ಕೊಡುವ ಮೊದಲೇ ಆಗಿನ ಸಿಎಂ ಸಿಬಿಐ ಕೊಟ್ಟಿದ್ದು ತಪ್ಪಲ್ವಾ? ಅವರು ಪ್ರಾಮಾಣಿಕರಾಗಿದ್ರೆ ಎಜಿ ಕೇಳಿ ಕೊಡಬೇಕಿತ್ತು.
ನಮ್ಮ ಪ್ರಾಮಾಣಿಕತೆ ಪ್ರಶ್ನೆ ಮಾಡೋ ಇವರು ಎಜಿ ಸಲಹೆ ಕೇಳಬೇಕಿತ್ತು. ಈಗಿನ ಎಜಿ ಅದು ತಪ್ಪು ಅಂದ ಕಾರಣಕ್ಕೆ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡಿದೆ ಎಂದರು.
ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಗೆ ಯಾರು ಬರ್ತಾರೆ, ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ವಿಜಯೇಂದ್ರ ಅಥವಾ ಯಾವುದೇ ವ್ಯಕ್ತಿಯಿಂದ ಪಕ್ಷದಲ್ಲಿ ಬದಲಾವಣೆ ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬರೋರ ಸಂಖ್ಯೆ ಹೆಚ್ಚಾಗಲಿದೆ, ಸರ್ಕಾರ ಸರಿಯಾದ ದಾರಿಯಲ್ಲಿದೆ. ಸೋಮಣ್ಣ ವಿಚಾರದಲ್ಲಿ ಮಾತುಕತೆ ಆಗ್ತಿದೆ, ಏನಾಗಿದೆ ಗೊತ್ತಿಲ್ಲ ಎಂದರು.

ಜಾತಿ ಗಣತಿ ಅನ್ನೋದು ಯಾರದ್ದೇ ಜಾತಿ ಎತ್ತಿ ತೋರಿಸೋ ಉದ್ದೇಶ ಅಲ್ಲ. ಆಯಾ ಜಾತಿಗಳ ಆರ್ಥಿಕ ಸ್ಥಿತಿಗತಿ ತಿಳಿಯೋ ಉದ್ದೇಶ. ಅವರನ್ನು ಮೇಲೆ ಎತ್ತೋದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸಮಾಜದಲ್ಲಿ ಮೇಲೆ ಎತ್ತೋ ಉದ್ದೇಶ ಜಾತಿ ಗಣತಿಯದ್ದು. ಸಿಎಂ, ಡಿಸಿಎಂ ಮಧ್ಯೆ ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಾತಿ ಗಣತಿ ವರದಿ ತೆಗೊಂಡು ಸಾಧಕ ಬಾಧಕ ನೋಡಿ ಸರ್ಕಾರ ಅನುಮೋದನೆ ನೀಡಲಿದೆ ಎಂದರು.
Urban Development Minister Byrathi Suresh has reacted to the cabinet's decision to withdraw from the CBI probe into the disproportionate assets case against Deputy Chief Minister DK Shivakumar. He had given an oral order to the Advocate General in this regard last time when the Yediyurappa government was in power.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm