ಬ್ರೇಕಿಂಗ್ ನ್ಯೂಸ್
24-11-23 02:56 pm Mangalore Correspondent ಕರಾವಳಿ
ಮಂಗಳೂರು, ನ.24: ಡಿಸಿಎಂ ಡಿಕೆ ಶಿವಕುಮಾರ್ ಮೇಲಿನ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯಿಂದ ವಾಪಸ್ ಪಡೆದ ಸಚಿವ ಸಂಪುಟದ ನಿರ್ಧಾರದ ಬಗ್ಗೆ ಮಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅಡ್ವೊಕೇಟ್ ಜನರಲ್ ಗೆ ಕಳೆದ ಬಾರಿ ಯಡಿಯೂರಪ್ಪ ಸರ್ಕಾರ ಇದ್ದಾಗ ಮೌಖಿಕ ಆದೇಶ ಕೊಟ್ಟಿದ್ದರು. ಮೌಖಿಕ ಆದೇಶ ಕೊಡೋದು ತಪ್ಪು ಅನ್ನೋದು ಆಗಿನ ಎಜಿ ಮತ್ತು ಈಗಿನ ಎಜಿ ಶಶಿಕಿರಣ್ ಶೆಟ್ಟಿ ಅಭಿಪ್ರಾಯ. ಆ ಪ್ರಕಾರ ಈಗ ಕೊಟ್ಟ ಅನುಮತಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ.
ಸಿಬಿಐ ಸುಪ್ರೀಂ ಅಥವಾ ಹೈಕೋರ್ಟ್ ಹೋಗೋದು ಅವರಿಗೆ ಬಿಟ್ಟಿದ್ದು. ಆಗಿನ ಸರ್ಕಾರ ಮಾಡಿರೋದು ತಪ್ಪು ಅಂತ ಎಜಿ ವರದಿ ಕೊಟ್ಟಿದ್ದಾರೆ. ಹೀಗಾಗಿ ಕ್ಯಾಬಿನೆಟ್ ಗೂ ಅದು ತಪ್ಪು ಅಂತ ಅನಿಸಿ ವಾಪಸ್ ತೆಗೊಂಡಿದೆ. ಬಿಜೆಪಿಯವರು ಪ್ರಾಮಾಣಿಕರಾಗಿದ್ದರೆ ಎಜಿ ಅಭಿಪ್ರಾಯ ಕೇಳಿ ತನಿಖೆಗೆ ಕೊಡಬೇಕಿತ್ತು. ಎಜಿ ಅಭಿಪ್ರಾಯ ಕೊಡುವ ಮೊದಲೇ ಆಗಿನ ಸಿಎಂ ಸಿಬಿಐ ಕೊಟ್ಟಿದ್ದು ತಪ್ಪಲ್ವಾ? ಅವರು ಪ್ರಾಮಾಣಿಕರಾಗಿದ್ರೆ ಎಜಿ ಕೇಳಿ ಕೊಡಬೇಕಿತ್ತು.
ನಮ್ಮ ಪ್ರಾಮಾಣಿಕತೆ ಪ್ರಶ್ನೆ ಮಾಡೋ ಇವರು ಎಜಿ ಸಲಹೆ ಕೇಳಬೇಕಿತ್ತು. ಈಗಿನ ಎಜಿ ಅದು ತಪ್ಪು ಅಂದ ಕಾರಣಕ್ಕೆ ಕ್ಯಾಬಿನೆಟ್ ನಿರ್ಧಾರ ತೆಗೆದುಕೊಂಡಿದೆ ಎಂದರು.
ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಕಾಂಗ್ರೆಸ್ ಗೆ ಯಾರು ಬರ್ತಾರೆ, ಹೋಗ್ತಾರೆ ಅಂತ ನನಗೆ ಗೊತ್ತಿಲ್ಲ. ವಿಜಯೇಂದ್ರ ಅಥವಾ ಯಾವುದೇ ವ್ಯಕ್ತಿಯಿಂದ ಪಕ್ಷದಲ್ಲಿ ಬದಲಾವಣೆ ಆಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬರೋರ ಸಂಖ್ಯೆ ಹೆಚ್ಚಾಗಲಿದೆ, ಸರ್ಕಾರ ಸರಿಯಾದ ದಾರಿಯಲ್ಲಿದೆ. ಸೋಮಣ್ಣ ವಿಚಾರದಲ್ಲಿ ಮಾತುಕತೆ ಆಗ್ತಿದೆ, ಏನಾಗಿದೆ ಗೊತ್ತಿಲ್ಲ ಎಂದರು.

ಜಾತಿ ಗಣತಿ ಅನ್ನೋದು ಯಾರದ್ದೇ ಜಾತಿ ಎತ್ತಿ ತೋರಿಸೋ ಉದ್ದೇಶ ಅಲ್ಲ. ಆಯಾ ಜಾತಿಗಳ ಆರ್ಥಿಕ ಸ್ಥಿತಿಗತಿ ತಿಳಿಯೋ ಉದ್ದೇಶ. ಅವರನ್ನು ಮೇಲೆ ಎತ್ತೋದೇ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಸಮಾಜದಲ್ಲಿ ಮೇಲೆ ಎತ್ತೋ ಉದ್ದೇಶ ಜಾತಿ ಗಣತಿಯದ್ದು. ಸಿಎಂ, ಡಿಸಿಎಂ ಮಧ್ಯೆ ಈ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಜಾತಿ ಗಣತಿ ವರದಿ ತೆಗೊಂಡು ಸಾಧಕ ಬಾಧಕ ನೋಡಿ ಸರ್ಕಾರ ಅನುಮೋದನೆ ನೀಡಲಿದೆ ಎಂದರು.
Urban Development Minister Byrathi Suresh has reacted to the cabinet's decision to withdraw from the CBI probe into the disproportionate assets case against Deputy Chief Minister DK Shivakumar. He had given an oral order to the Advocate General in this regard last time when the Yediyurappa government was in power.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm