ಬ್ರೇಕಿಂಗ್ ನ್ಯೂಸ್
15-11-20 11:43 am Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 15: ಡೆಲಿವರಿ ಕೆಲಸ ಮಾಡುತ್ತಿದ್ದ ಯುವಕನನ್ನು ಅಡ್ಡಗಟ್ಟಿ ತಲೆಗೆ ಹೊಡೆದು ಹಲ್ಲೆಗೈದು ಆತನ ಕೈಯಲ್ಲಿದ್ದ 15 ಸಾವಿರ ಹಣ ದರೋಡೆಗೈದ ಘಟನೆ ನಡೆದಿದ್ದು ಮಂಗಳೂರಿನ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ ಕುಲಶೇಖರ ನಿವಾಸಿ ಮಂಜುನಾಥ (24) ಆಸ್ಪತ್ರೆಗೆ ದಾಖಲಾಗಿದ್ದಾನೆ. ರಾತ್ರಿ 11 ಗಂಟೆ ವೇಳೆಗೆ ಕುದ್ರೋಳಿಯಲ್ಲಿ ಘಟನೆ ನಡೆದಿದೆ. ಕಂಕನಾಡಿಯ ಸಿಟಿ ಗೋಲ್ಡ್ ಬಳಿಯ ಬಿಲ್ಡಿಂಗ್ ನಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಮತ್ತು ಹೂವಿನ ಬುಕ್ಕೆ ಆರ್ಡರ್ ಇತ್ತು. ಅದರಂತೆ ಮಂಜುನಾಥ್, ಕುದ್ರೋಳಿಯಿಂದ ಕೇಕ್ ಮತ್ತು ಹೂವಿನ ಬುಕ್ಕೆ ಪಡೆದು ಸ್ಕೂಟರಿನಲ್ಲಿ ಬರುತ್ತಿದ್ದಾಗ ಕುದ್ರೋಳಿ ಮಸೀದಿ ಬಳಿ, ಇರ್ಫಾನ್ ಅಳಕೆ ಮತ್ತು ಫಹಾದ್ ಕುದ್ರೋಳಿ ಎಂಬ ಇಬ್ಬರು ಯುವಕರು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಗೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಮುಂದಕ್ಕೆ ಈ ಕಡೆಗೆ ಬಂದರೆ ಜೀವ ಸಹಿತ ಬಿಡಲ್ಲ ಎಂದು ನೆಲಕ್ಕೆ ಹಾಕಿ ಕಾಲಿನಲ್ಲಿ ತುಳಿದಿದ್ದಾರೆ. ಇದರಿಂದ ಬೆದರಿದ ಮಂಜುನಾಥ್, ಸ್ಕೂಟರನ್ನು ಬಿಟ್ಟು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ. ಗ್ರಾಹಕರಿಂದ ಪಡೆದಿದ್ದ 15 ಸಾವಿರ ಹಣ ಸ್ಕೂಟರಿನಲ್ಲಿತ್ತು. ಅದನ್ನು ಆರೋಪಿಗಳು ಕಿತ್ತುಕೊಂಡಿದ್ದಾರೆ ಎಂದು ಬಂದರು ಠಾಣೆಯಲ್ಲಿ ಮಂಜುನಾಥ್ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.


ನ.6ರಂದು ಘಟನೆ ನಡೆದರೂ, ಪೊಲೀಸರು ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಮಂಜುನಾಥ್ ದೂರಿದ್ದಾನೆ. ರಾತ್ರಿ ವೇಳೆ ಯುವಕನ ಅಡ್ಡಗಟ್ಟಿ ದರೋಡೆ ನಡೆಸಿದ್ರೂ ಆರೋಪಿಗಳ ಗುರುತು ಹೇಳಿದ್ದರೂ ಪೊಲೀಸರು ಬಂಧಿಸದೆ ಮೀನ ಮೇಷ ಎಣಿಸುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ.
Miscreants attack Delivery boy with a soda bottle in Kudroli, Mangalore by looting 15,000 Rs Cash. Though the case has been registered at Bunder Police station yet the culprits are not been arrested by the police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm