ಬ್ರೇಕಿಂಗ್ ನ್ಯೂಸ್
24-11-23 08:21 pm Udupi Correspondent ಕರಾವಳಿ
ಉಡುಪಿ, ನ 24: ಮಾಜಿ ಸಚಿವ ಸುನಿಲ್ ಕುಮಾರ್ ಹಾಗೂ ಎಸ್ಪಿ ಡಾ.ಅರುಣ್ ಅವರ ನಡುವೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಇದ್ದ ಕೆಡಿಪಿ ಸಭೆಯಲ್ಲೇ ಮಾತಿನ ಜಟಾಪಟಿ ನಡೆದಿದೆ. ಕಳೆದ ಒಂದೂವರೆ ತಿಂಗಳ ಹಿಂದೆ ಜಿಲ್ಲೆಯಲ್ಲಿ ಲಾರಿ ಮುಷ್ಕರದ ಪ್ರತಿಭಟನಾಕಾರರಿಗೆ ಎಸ್ಪಿ ನೋಟಿಸ್ ನೀಡಿದ ವಿಚಾರದಲ್ಲಿ ಇಬ್ಬರ ನಡುವೆ ವಾದ ನಡೆದಿದೆ.
ಈ ಹಿಂದೆ ಹೆದ್ದಾರಿಯಲ್ಲಿ ಲಾರಿ ಮುಷ್ಕರ ಮಾಡಿದ್ದ ಕಾರ್ಮಿಕರ ಮೇಲೆ ಎಸ್ಪಿ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಸುನೀಲ್ ಕುಮಾರ್, ಪ್ರತಿಭಟನೆ ಹೇಗೆ ಮಾಡಬೇಕು ಎಂದು ನೀವು ನಿರ್ಧರಿಸುತ್ತೀರಾ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವ ಹಕ್ಕು ಎಲ್ಲರಿಗೂ ಇದೆ. ಯಾವ ರೀತಿ ಪ್ರತಿಭಟನೆ ಮಾಡಬೇಕು ಎಂದು ನಿಬಂಧನೆಗಳನ್ನು ಹೇಳಿ, ನಾವು ಮನೆಯಲ್ಲಿ ಕೂತು ಭಜನೆ ಮಾಡಬೇಕಾ? ನಮ್ಮ ಜಿಲ್ಲೆಯಲ್ಲಿ ಹೇಗೆ ಪ್ರತಿಭಟನೆ ಮಾಡಬೇಕೆಂದು ನೀವೇ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಚಿವರ ಮಾತಿಗೆ ಎಸ್ಪಿ ತಿರುಗೇಟು ನೀಡಿದ್ದು, ನಾನು ಕಾನೂನು ಪ್ರಕಾರ ಕಾರ್ಯನಿರ್ವಹಿಸುತ್ತೇನೆ. ಇದೇ ವಿಚಾರದಲ್ಲಿ ಕೆಲ ನಿಮಿಷಗಳ ಕಾಲ ಮಾತಿನ ಜಟಾಪಟಿ ನಡೆಯಿತು. ಲಾರಿಯವರು ಕೋರ್ಟ್ಗೆ ಹೋಗಲಿ ಎಂದು ಉತ್ತರ ನೀಡಿದರು.
ಬಳಿಕ ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ಮಧ್ಯ ಪ್ರವೇಶಿಸಿ, ಸುನಿಲ್ ಕುಮಾರ್ ಅವರನ್ನು ಸಮಾಧಾನಪಡಿಸಿದರು. ಅಲ್ಲದೇ ಸಾಕು ಸುಮ್ನಿರಪ್ಪಾ, ಜಾಸ್ತಿ ಆಯ್ತು ಎಂದು ಎಸ್ಪಿ ಅವರನ್ನು ಸುಮ್ಮನಿರಿಸಿದ್ದಾರೆ.
Karkala Mla Sunil Kumar and Udupi SP Arun Kumar fight openly in Kdp meeting at Udupi in front of minister Lakshmi Hebbalkar.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 04:22 pm
HK News Staffer
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm