ಬ್ರೇಕಿಂಗ್ ನ್ಯೂಸ್
24-11-23 10:57 pm Mangalore Correspondent ಕರಾವಳಿ
ಉಳ್ಳಾಲ, ನ.24: ಭ್ರಷ್ಟಾಚಾರ ಆರೋಪ ಹೊತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟವು ತನಿಖೆಗೆ ಕೊಟ್ಟ ಅನುಮತಿಯನ್ನ ಹಿಂಪಡೆದದ್ದು ಖಂಡನೀಯ. ಸ್ಪೀಕರ್ ಕುರ್ಚಿಗೂ ಧರ್ಮ ಲೇಪನ ನೀಡಿರುವ ಸಚಿವ ಜಮೀರ್ ಅಹಮ್ಮದ್ ಅವರ ನಡೆಯ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಪ್ರಶ್ನಿಸಲಿದ್ದೇವೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ
ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿದೆ. ಯಾವುದೇ ರಾಗ ದ್ವೇಷಗಳಿಲ್ಲದೆ ಆಡಳಿತ ನಡೆಸುವುದಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಯನ್ನ ಹಿಂದೆಗೆಯುವ ಮೂಲಕ ಭ್ರಷ್ಟಾಚಾರ ಆರೋಪ ಹೊತ್ತ ಉಪ ಮುಖ್ಯ ಮಂತ್ರಿಯ ರಕ್ಷಣೆಗೆ ನಿಂತಿರುವುದು ಖೇದಕರ.

ತನಿಖೆ ಹಂತದಲ್ಲಿರುವ ಪ್ರಕರಣಗಳಲ್ಲಿ ಸರಕಾರ ಮೂಗು ತೂರಿಸಬಾರದು. ಜನಪ್ರತಿನಿಧಿಗಳು ಸೇರಿದಂತೆ ಇನ್ನಿತರ ಕ್ರಿಮಿನಲ್ ಪ್ರಕರಣಗಳಿಗೆ ಸರ್ಕಾರ ಕೈ ಹಾಕಬಾರದು ಎಂದು ಸುಪ್ರೀಂ ಕೋರ್ಟ್ ತಿಳಿಸಿದ್ದರೂ ಶಾಸನಬದ್ಧ ಸರಕಾರ ಸಚಿವ ಸಂಪುಟದ ಮೂಲಕ ತನಿಖೆಯನ್ನ ಹಿಂಪಡೆದದ್ದು ಸಿದ್ಧರಾಮಯ್ಯ ಸರಕಾರ ಭ್ರಷ್ಟಾಚಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತಿರುವುದನ್ನ ಜಗಜ್ಜಾಹೀರಾಗಿಸಿದೆ ಎಂದರು.
ಸಚಿವ ಜಮೀರ್ ಅಹ್ಮದ್ ಭಾಷಣವೊಂದರಲ್ಲಿ ಸ್ಪೀಕರ್ ಯು.ಟಿ. ಖಾದರ್ ಗೆ ಬಿಜೆಪಿಯವರೂ ಸಲಾಂ ಹೊಡೆಯುವಂತೆ ಮಾಡಿದ್ದೇವೆ ಎಂದು ಹೇಳಿರುವುದು ಪ್ರಜಾ ಪ್ರಭುತ್ವದ ಅಪಹಾಸ್ಯ ಮಾಡಿದಂತೆ. ಸಭಾಪತಿಗಳ ಕುರ್ಚಿಗೂ ಧರ್ಮದ ಲೇಪನ ನೀಡುವ ಜಮೀರ್ ರಾಜೀನಾಮೆ ಪಡೆಯುವ ತಾಕತ್ತು ಸಿದ್ಧರಾಮಯ್ಯರಿಗೆ ಇದೆಯೇ ಎಂದು ಕೋಟ ಪ್ರಶ್ನಿಸಿದರು. ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್, ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕಾರ್ಯದರ್ಶಿ ಸತೀಶ್ ಕುಂಪಲ ಮೊದಲಾದವರು ಪತ್ರಿಕಾ ಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
Mangalore Kota Srinivas Poojary slams congress DCM Dk Shivakumar.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 04:22 pm
HK News Staffer
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm