ಬ್ರೇಕಿಂಗ್ ನ್ಯೂಸ್
15-11-20 09:01 pm Udupi Correspondent ಕರಾವಳಿ
ಉಡುಪಿ ನ.15: ಸಿನೆಮಾದಿಂದ ಪ್ರೇರಿತನಾದ ಯುವಕನೊಬ್ಬ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದ ಪ್ರಸಂಗ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ಯುವಕನನ್ನು ಉಡುಪಿಯ ಸಾಮಾಜಿಕ ಕಾರ್ಯಕರ್ತರು ರಕ್ಷಿಸಿದ್ದಾರೆ.
ಚಿತ್ರದುರ್ಗದ ಪದವೀಧರ ಯುವಕ ಕೆಲಸವಿಲ್ಲದೆ, ಮನನೊಂದು ಮನೆ ಬಿಟ್ಟಿದ್ದ. ಊರಿಂದ ಊರಿಗೆ ಸಂಚರಿಸುತ್ತಿದ್ದ ವೇಳೆ ‘ಅಮ್ಮ ಐ ಲವ್ ಯು’ ಎಂಬ ಸಿನೆಮಾ ನೋಡಿದ್ದಾನೆ. ಸಿನೆಮಾ ಕತೆಯಿಂದ ಪ್ರೇರಣೆ ಪಡೆದ ಯುವಕ ಅದರಲ್ಲಿದ್ದ ರೀತಿ 48 ದಿನಗಳ ಕಾಲ ಉಡುಪಿಯಲ್ಲಿ ಭಿಕ್ಷೆ ಬೇಡಿ ತಿಂದರೆ ಕಷ್ಟ ಪರಿಹಾರ ಆಗುವುದೆಂದು ನಂಬಿದ್ದಾನೆ. ಅದರಂತೆ ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ಭಿಕ್ಷೆ ಬೇಡುತ್ತಿದ್ದನೆನ್ನಲಾಗಿದೆ.
ಯುವಕನನ್ನು ಗಮನಿಸಿದ ಸಾಮಾಜಿಕ ಕಾರ್ಯಕರ್ತರಾದ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ತಾರಾನಾಥ್ ಮೇಸ್ತ ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಆತ ಗುಣಮುಖನಾಗಿದ್ದಾನೆ.
ಮಗ ಮನೆ ಬಿಟ್ಟಂದಿನಿಂದ ಹೆತ್ತವರು ಹುಡುಕಾಟದಲ್ಲಿ ನಿರತರಾಗಿದ್ದರು. ಮಗನ ಇರುವಿಕೆಯ ಸುದ್ದಿ ತಿಳಿದ ತಂದೆ ಕೂಡಲೇ ಉಡುಪಿಗೆ ಆಗಮಿಸಿ ಮಗನನ್ನು ಊರಿಗೆ ಕರೆದುಕೊಂಡು ಹೋಗಿದ್ದಾರೆ.
ಈ ವರ್ಷ ಮಗನಿಲ್ಲದೆ ದೀಪಾವಳಿ ಆಚರಣೆ ಮಾಡದಿರಲು ಹೆತ್ತವರು ನಿರ್ಧರಿಸಿದ್ದರು. ಇದೀಗ ದೀಪಾವಳಿ ಸಂದರ್ಭದಲ್ಲೇ ಮಗ ಸಿಕ್ಕಿರುವುದು ಸಂತಸ ತಂದಿದೆ ಎಂದು ಯುವಕನ ತಂದೆ ಸಂತಸ ವ್ಯಕ್ತಪಡಿಸಿದ್ದಾರೆ.
In a strange incident man in Udupi who was inspired by, I Love You Amma movie becomes passionate about begging goes street to street to beg. Social activities who saw him counselled him and made arrangements to reach him back to his home town.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm