ಬ್ರೇಕಿಂಗ್ ನ್ಯೂಸ್
28-11-23 06:09 pm Mangalore Correspondent ಕರಾವಳಿ
ಮಂಗಳೂರು, ನ.27: ಶಿಕ್ಷಕರು ಕೊನೆಗಾಲದಲ್ಲಿ ಪಿಂಚಣಿ ಇದೆಯೆಂದು ಭರವಸೆಯಲ್ಲಿ ಇರುತ್ತಿದ್ದರು. ಆದರೆ ಈಗ ಅಂತಹ ಸನ್ನಿವೇಶ ಇಲ್ಲ. 2006ರಲ್ಲಿ ಜೆಡಿಎಸ್ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಆಗಿದ್ದ ಯಡಿಯೂರಪ್ಪ ಸರಕಾರವೇ ಪಿಂಚಣಿ ವ್ಯವಸ್ಥೆಯನ್ನು ತೆಗೆದು ಹಾಕಿದ್ದರು. ಶಿಕ್ಷಕರು ಪಿಂಚಣಿ ಇಲ್ಲದ ದುರವಸ್ಥೆ ಅನುಭವಿಸುತ್ತಿದ್ದರೆ, ಅದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಕಾರಣ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಕೆ ಮಂಜುನಾಥ್ ಹೇಳಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮೂರನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. 17 ವರ್ಷ ಗಣಿತ ಶಿಕ್ಷಕನಾಗಿ, ಶಿಕ್ಷಕರ ಸಮಸ್ಯೆ ಅರಿತಿದ್ದೇನೆ. ಆಬಳಿಕ ನಿವೃತ್ತಿ ಪಡೆದು ಸಾರ್ವಜನಿಕ ಜೀವನದಲ್ಲಿದ್ದೇನೆ. ಶಿಕ್ಷಕರು ತಮ್ಮದೇ ಸಮುದಾಯದ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮೊದಲ ಬಾರಿ 2012ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋಲು ಅನುಭವಿಸಿದ್ದೆ. ಆಗ ಸದಾನಂದ ಗೌಡ ಸಿಎಂ ಆಗಿದ್ದು, ಸ್ವತಃ ಅಧಿಕಾರ ದುರುಪಯೋಗ ಪಡಿಸಿ ಮತಗಳನ್ನು ಖರೀದಿಸಿದ್ದರು. ಅದರ ಪರಿಣಾಮವಾಗಿ ಮಗಂಳೂರಿನಂಥ ಜಾಗದಲ್ಲಿ ಕೇವಲ 20 ಶೇಕಡಾ ಅಷ್ಟೇ ಓಟಿಂಗ್ ಆಗಿತ್ತು. 2018ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರಿಂದ ಶಿಕ್ಷಕರಿಗೆ ಆಮಿಷ ತೋರಿಸಿ ಭೋಜೇಗೌಡರನ್ನು ಗೆಲ್ಲಿಸಿದ್ದರು.
ಆದರೆ ಶಿಕ್ಷಕರ ಸಮಸ್ಯೆಯ ಬಗ್ಗೆ ಒಂದು ಬಾರಿಯೂ ದನಿಯೆತ್ತದ ಶಾಸಕನಿದ್ದರೆ ಅದು ಭೋಜೇಗೌಡ. ಶಿಕ್ಷಕರ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಆ ಹಣವನ್ನು ಷೇರು ಮಾರುಕಟ್ಟೆಗೆ ಹಾಕಿ, ಜೂಜಿಗಿಟ್ಟವರು ಬಿಜೆಪಿಯವರು. ಷೇರು ಮಾರುಕಟ್ಟೆಗೆ ನಾನು ಕೂಡ 6 ಲಕ್ಷ ರೂಪಾಯಿ ಐದು ವರ್ಷಗಳ ಹಿಂದೆ ಹಾಕಿದ್ದೆ. ಅದೀಗ ಮೈನಸ್ ಆಗಿದ್ದು ಹಾಕಿದ್ದ ಹಣವೂ ಇಲ್ಲದಾಗಿದೆ. ಶಿಕ್ಷಕರ ಹಣವನ್ನು ಈ ರೀತಿ ಷೇರು ಜೂಜಿಗೆ ಹಾಕಿ, ದುಡಿದ ಹಣವನ್ನು ದುರುಪಯೋಗ ಮಾಡಿದ್ದಾರೆ. ಇದೊಂದು ಕೆಟ್ಟ ಪದ್ಧತಿಯಾಗಿದ್ದು, ಕಾಂಗ್ರೆಸ್ ಶಿಕ್ಷಕರ ಕ್ಷೇತ್ರದಲ್ಲಿ ಗೆದ್ದು ಬಂದರೆ ಮರಳಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವ ಕೆಲಸ ಮಾಡುತ್ತೇವೆ ಎಂದರು.
ಶಿಕ್ಷಕರ ಸಮಸ್ಯೆಯನ್ನು ಅತಿ ಹೆಚ್ಚು ಆಲಿಸಿದ್ದು, ಅವರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಆದರೆ, ಶಿಕ್ಷಕರು ಕಾಂಗ್ರೆಸಿಗರನ್ನು ಗೆಲ್ಲಿಸಿಲ್ಲ. ಈ ಬಾರಿಯ ಗ್ಯಾರಂಟಿ ಯೋಜನೆ, ಜನಪರ ಆಡಳಿತದಿಂದಾಗಿ ಶಿಕ್ಷಕರು ಸೇರಿದಂತೆ ಜನರು ಕಾಂಗ್ರೆಸ್ ಪರ ಇದ್ದಾರೆ. ಓಟು ಕೊಟ್ಟು ಗೆಲ್ಲಿಸುತ್ತಾರೆಂದು ಭರವಸೆ ಇದೆ. ಈ ಬಾರಿ 18 ಸಾವಿರದಷ್ಟು ಶಿಕ್ಷಕರನ್ನು ಮತ ಪಟ್ಟಿಗೆ ನೋಂದಣಿ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಸಾವಿರ ಮಂದಿ ಇದ್ದಾರೆ ಎಂದರು. ಜೆಆರ್ ಲೋಬೊ, ಪ್ರವೀಣಚಂದ್ರ ಆಳ್ವ ಮತ್ತಿತರರು ಇದ್ದರು.
K K Manjunath in Mangalore, slams BJP and JDS of teachers pension.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm