ಬ್ರೇಕಿಂಗ್ ನ್ಯೂಸ್
28-11-23 06:09 pm Mangalore Correspondent ಕರಾವಳಿ
ಮಂಗಳೂರು, ನ.27: ಶಿಕ್ಷಕರು ಕೊನೆಗಾಲದಲ್ಲಿ ಪಿಂಚಣಿ ಇದೆಯೆಂದು ಭರವಸೆಯಲ್ಲಿ ಇರುತ್ತಿದ್ದರು. ಆದರೆ ಈಗ ಅಂತಹ ಸನ್ನಿವೇಶ ಇಲ್ಲ. 2006ರಲ್ಲಿ ಜೆಡಿಎಸ್ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಡಿಸಿಎಂ ಆಗಿದ್ದ ಯಡಿಯೂರಪ್ಪ ಸರಕಾರವೇ ಪಿಂಚಣಿ ವ್ಯವಸ್ಥೆಯನ್ನು ತೆಗೆದು ಹಾಕಿದ್ದರು. ಶಿಕ್ಷಕರು ಪಿಂಚಣಿ ಇಲ್ಲದ ದುರವಸ್ಥೆ ಅನುಭವಿಸುತ್ತಿದ್ದರೆ, ಅದಕ್ಕೆ ಬಿಜೆಪಿ ಮತ್ತು ಜೆಡಿಎಸ್ ಕಾರಣ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆಕೆ ಮಂಜುನಾಥ್ ಹೇಳಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಮೂರನೇ ಬಾರಿಗೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. 17 ವರ್ಷ ಗಣಿತ ಶಿಕ್ಷಕನಾಗಿ, ಶಿಕ್ಷಕರ ಸಮಸ್ಯೆ ಅರಿತಿದ್ದೇನೆ. ಆಬಳಿಕ ನಿವೃತ್ತಿ ಪಡೆದು ಸಾರ್ವಜನಿಕ ಜೀವನದಲ್ಲಿದ್ದೇನೆ. ಶಿಕ್ಷಕರು ತಮ್ಮದೇ ಸಮುದಾಯದ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮೊದಲ ಬಾರಿ 2012ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಅಂತರದಿಂದ ಸೋಲು ಅನುಭವಿಸಿದ್ದೆ. ಆಗ ಸದಾನಂದ ಗೌಡ ಸಿಎಂ ಆಗಿದ್ದು, ಸ್ವತಃ ಅಧಿಕಾರ ದುರುಪಯೋಗ ಪಡಿಸಿ ಮತಗಳನ್ನು ಖರೀದಿಸಿದ್ದರು. ಅದರ ಪರಿಣಾಮವಾಗಿ ಮಗಂಳೂರಿನಂಥ ಜಾಗದಲ್ಲಿ ಕೇವಲ 20 ಶೇಕಡಾ ಅಷ್ಟೇ ಓಟಿಂಗ್ ಆಗಿತ್ತು. 2018ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದರಿಂದ ಶಿಕ್ಷಕರಿಗೆ ಆಮಿಷ ತೋರಿಸಿ ಭೋಜೇಗೌಡರನ್ನು ಗೆಲ್ಲಿಸಿದ್ದರು.
ಆದರೆ ಶಿಕ್ಷಕರ ಸಮಸ್ಯೆಯ ಬಗ್ಗೆ ಒಂದು ಬಾರಿಯೂ ದನಿಯೆತ್ತದ ಶಾಸಕನಿದ್ದರೆ ಅದು ಭೋಜೇಗೌಡ. ಶಿಕ್ಷಕರ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಆ ಹಣವನ್ನು ಷೇರು ಮಾರುಕಟ್ಟೆಗೆ ಹಾಕಿ, ಜೂಜಿಗಿಟ್ಟವರು ಬಿಜೆಪಿಯವರು. ಷೇರು ಮಾರುಕಟ್ಟೆಗೆ ನಾನು ಕೂಡ 6 ಲಕ್ಷ ರೂಪಾಯಿ ಐದು ವರ್ಷಗಳ ಹಿಂದೆ ಹಾಕಿದ್ದೆ. ಅದೀಗ ಮೈನಸ್ ಆಗಿದ್ದು ಹಾಕಿದ್ದ ಹಣವೂ ಇಲ್ಲದಾಗಿದೆ. ಶಿಕ್ಷಕರ ಹಣವನ್ನು ಈ ರೀತಿ ಷೇರು ಜೂಜಿಗೆ ಹಾಕಿ, ದುಡಿದ ಹಣವನ್ನು ದುರುಪಯೋಗ ಮಾಡಿದ್ದಾರೆ. ಇದೊಂದು ಕೆಟ್ಟ ಪದ್ಧತಿಯಾಗಿದ್ದು, ಕಾಂಗ್ರೆಸ್ ಶಿಕ್ಷಕರ ಕ್ಷೇತ್ರದಲ್ಲಿ ಗೆದ್ದು ಬಂದರೆ ಮರಳಿ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವ ಕೆಲಸ ಮಾಡುತ್ತೇವೆ ಎಂದರು.
ಶಿಕ್ಷಕರ ಸಮಸ್ಯೆಯನ್ನು ಅತಿ ಹೆಚ್ಚು ಆಲಿಸಿದ್ದು, ಅವರ ಪರವಾಗಿ ಕೆಲಸ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಆದರೆ, ಶಿಕ್ಷಕರು ಕಾಂಗ್ರೆಸಿಗರನ್ನು ಗೆಲ್ಲಿಸಿಲ್ಲ. ಈ ಬಾರಿಯ ಗ್ಯಾರಂಟಿ ಯೋಜನೆ, ಜನಪರ ಆಡಳಿತದಿಂದಾಗಿ ಶಿಕ್ಷಕರು ಸೇರಿದಂತೆ ಜನರು ಕಾಂಗ್ರೆಸ್ ಪರ ಇದ್ದಾರೆ. ಓಟು ಕೊಟ್ಟು ಗೆಲ್ಲಿಸುತ್ತಾರೆಂದು ಭರವಸೆ ಇದೆ. ಈ ಬಾರಿ 18 ಸಾವಿರದಷ್ಟು ಶಿಕ್ಷಕರನ್ನು ಮತ ಪಟ್ಟಿಗೆ ನೋಂದಣಿ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಸಾವಿರ ಮಂದಿ ಇದ್ದಾರೆ ಎಂದರು. ಜೆಆರ್ ಲೋಬೊ, ಪ್ರವೀಣಚಂದ್ರ ಆಳ್ವ ಮತ್ತಿತರರು ಇದ್ದರು.
K K Manjunath in Mangalore, slams BJP and JDS of teachers pension.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm