ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.


ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm