ಬ್ರೇಕಿಂಗ್ ನ್ಯೂಸ್
29-11-23 07:39 pm Mangalore Correspondent ಕರಾವಳಿ
ಮಂಗಳೂರು, ನ.29: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಒಂದು ವರ್ಷದ ಬಳಿಕ ಮೊಹಮ್ಮದ್ ಶಾರೀಕ್ ಮತ್ತು ಸೈಯದ್ ಯಾಸೀನ್ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
2022ರ ನವೆಂಬರ್ 19ರಂದು ಕಂಕನಾಡಿ ಬಳಿಯ ನಾಗುರಿಯಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆಗಿತ್ತು. ಮೊಹಮ್ಮದ್ ಶಾರೀಕ್, ಕುಕ್ಕರ್ ಬಾಂಬನ್ನು ಕದ್ರಿ ದೇವಸ್ಥಾನ ಪರಿಸರದಲ್ಲಿ ಸ್ಫೋಟಿಸಲು ತರುತ್ತಿದ್ದಾಗ ನಾಗುರಿಯಲ್ಲಿ ಅಕಸ್ಮಾತ್ ಸ್ಫೋಟಗೊಂಡಿತ್ತು. ಸ್ಫೋಟ ಘಟನೆಯಲ್ಲಿ ಮೊಹಮ್ಮದ್ ಶಾರೀಕ್ ಅರೆಬರೆ ಬೆಂದು ಹೋಗಿದ್ದರೆ, ಆಟೋ ಚಾಲಕ ಪುರುಷೋತ್ತಮ ಪೂಜಾರಿ ನಲ್ವತ್ತು ಶೇಕಡಾದಷ್ಟು ಸುಟ್ಟು ಹೋಗಿದ್ದರು. ಘಟನೆ ಬಳಿಕ ನಾಲ್ಕು ತಿಂಗಳ ಕಾಲ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದ ಶಾರೀಕ್ ನನ್ನು ಗುಣಮುಖನಾದ ಬಳಿಕ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.


ಬಾಂಬ್ ಸ್ಫೋಟ ಘಟನೆ ಬಗ್ಗೆ 2022ರ ನವೆಂಬರ್ 23ರಂದು ದೆಹಲಿ ಎನ್ಐಎ ವಿಭಾಗದಲ್ಲಿ 120 ಬಿ, 307 ಐಪಿಸಿ ಮತ್ತು ಸ್ಫೋಟಕ ಕಾಯ್ದೆಯಡಿ 3, 4 ಮತ್ತು 5ರ ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು. 2023ರ ಜುಲೈ ತಿಂಗಳಲ್ಲಿ ಶಾರೀಕ್ ಮತ್ತು ಸೈಯದ್ ಯಾಸಿನ್ ಅವರನ್ನು ಎನ್ಐಎ ಬಂಧಿಸಿತ್ತು. ತನಿಖೆಯ ಬಳಿಕ ಇದೇ ನ.29ರಂದು ಬುಧವಾರ ಇವರಿಬ್ಬರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾಗಿ ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ. ಹಿಂದುಗಳನ್ನು ಭಯಪಡಿಸುವ ಉದ್ದೇಶದಿಂದ ಕದ್ರಿ ದೇವಸ್ಥಾನದಲ್ಲಿ ಬಾಂಬ್ ಸ್ಫೋಟಿಸಲು ಸಂಚು ಹೂಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖ ಮಾಡಿದ್ದಾರೆ.
ಶಾರೀಕ್ ಮತ್ತು ಯಾಸೀನ್ ತಮ್ಮ ಆನ್ಲೈನ್ ಹ್ಯಾಂಡ್ಲರ್ ಗಳ ಸೂಚನೆಯಂತೆ, ಬಾಂಬ್ ಸ್ಫೋಟಕ್ಕೆ ಸ್ಕೆಚ್ ಹಾಕಿದ್ದರು. ಸ್ಫೋಟಕ ಸಾಮಗ್ರಿಯನ್ನು ಯಾಸೀನ್ ಒದಗಿಸಿದ್ದರೆ, ಅದನ್ನು ಬಳಸ್ಕೊಂಡು ಮೊಹಮ್ಮದ್ ಶಾರೀಕ್ ಕುಕ್ಕರ್ ಬಾಂಬ್ ತಯಾರಿಸಿದ್ದ ಎಂದು ಎನ್ಐಎ ಅಧಿಕಾರಿಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶಾರೀಕ್ ಮೊದಲ ಬಾರಿಗೆ 2020ರಲ್ಲಿ ಮಂಗಳೂರಿನಲ್ಲಿ ಲಷ್ಕರ್ ಉಗ್ರರ ಪರವಾಗಿ ಗೋಡೆ ಬರಹ ಬರೆದು ತನಿಖಾ ಏಜನ್ಸಿಗಳ ಟಾರ್ಗೆಟ್ ಆಗಿದ್ದ. ಅದೇ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ನಡೆದ ಭಯೋತ್ಪಾದಕ ಕೃತ್ಯ, ಬಾಂಬ್ ಟ್ರಯಲ್ ಪ್ರಕರಣದಲ್ಲಿಯೂ ಶಾರೀಕ್ ಹೆಸರು ಕೇಳಿಬಂದಿತ್ತು. ಆ ಪ್ರಕರಣದಲ್ಲಿ ಯಾಸೀನ್ ಸೇರಿದಂತೆ ಹತ್ತು ಮಂದಿಯನ್ನು ಎನ್ಐಎ ಬಂಧಿಸಿತ್ತು.
ಬಾಂಬ್ ಟ್ರಯಲ್ ಪ್ರಕರಣದಲ್ಲಿ ಶಾರೀಕ್, ಯಾಸೀನ್ ಸಹಿತ 9 ಮಂದಿಯ ವಿರುದ್ಧ ಎನ್ಐಎ ಅಧಿಕಾರಿಗಳು ಕಳೆದ ಜೂನ್ 30ರಂದು ದೋಷಾರೋಪ ಸಲ್ಲಿಸಿದ್ದರು. ದೇಶದ ವಿರುದ್ಧ ಮುಸ್ಲಿಂ ಯುವಕರನ್ನು ಪ್ರಚೋದಿಸಿ, ಐಸಿಸ್ ನೆಟ್ವರ್ಕ್ ಸೇರುವಂತೆ ಮಾಡುವ ಕೃತ್ಯದಲ್ಲಿ ಯಾಸೀನ್ ಮತ್ತು ಶಾರೀಕ್ ನಿರತರಾಗಿದ್ದರು ಎಂದು ದೋಷಾರೋಪ ಪಟ್ಟಿಯಲ್ಲಿ ತಿಳಿಸಲಾಗಿತ್ತು.
Mangalore Cooker bomb blast, NIA charge sheet, destroying Hindus was their target. One of the accused, Mohamed Shariq, had been carrying the improvised explosive device (IED) in an auto-rickshaw when it exploded on November 19 last year. He had planned to plant the IED at Kadri Manjunatha Temple, Mangaluru, with the aim to create terror among the Hindu community but the low intensify bomb accidentally exploded on the way.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm