ಬ್ರೇಕಿಂಗ್ ನ್ಯೂಸ್
16-11-20 03:27 pm Mangaluru Correspondent ಕರಾವಳಿ
ಉಳ್ಳಾಲ: ನವೆಂಬರ್, 16: ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ಶಿಥಿಲಗೊಂಡಿರುವ ಹಳೆಯ ವಸತಿ ಮತ್ತು ವಾಣಿಜ್ಯ ಕಟ್ಟಡದ ಬಾಡಿಗೆ ಮನೆಯೊಂದರಲ್ಲಿ ಬೆಂಕಿ ಅವಘಡ ನಡೆದಿದ್ದು ಮನೆಯಲ್ಲಿದ್ದ ಒಂಟಿ ವಿಧವೆಯ ನಗ, ನಗದು, ಬಟ್ಟೆಬರೆಗಳು ಸುಟ್ಟು ಕರಕಲಾಗಿವೆ.
ವಿದ್ಯಾ ಶೆಟ್ಟಿ ಎಂಬ ಒಂಟಿ ಮಹಿಳೆ ಕಳೆದ ಎಂಟು ವರ್ಷಗಳಿಂದ ಪಂಡಿತ್ ಹೌಸ್ನ ವಿಜಯಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಬಾಡಿಗೆ ವಾಸವಿದ್ದರೆನ್ನಲಾಗಿದೆ. ವಿದ್ಯಾ ಅವರು ನಗರದ ಕೆಎಮ್ ಸಿ ಆಸ್ಪತ್ರೆಯಲ್ಲಿ ಸಣ್ಣ ಉದ್ಯೋಗದಲ್ಲಿದ್ದು ಇಂದು ಬೆಳಗ್ಗೆ ಎಂದಿನಂತೆ ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದು ಮಧ್ಯಾಹ್ನದ ಹೊತ್ತಿಗೆ ಮನೆಯೊಳಗೆ ಬೆಂಕಿ ಆಕಸ್ಮಿಕ ನಡೆದಿದ್ದು ಶಾರ್ಟ್ ಸರ್ಕ್ಯುಟ್ ನಿಂದ ಅನಾಹುತ ನಡೆದಿರುವುದಾಗಿ ಶಂಕಿಸಲಾಗಿದೆ.
ಅಗ್ನಿ ಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ವಿದ್ಯಾ ಅವರು ಮನೆಯೊಳಗಿಟ್ಟಿದ್ದ 12,000 ರೂಪಾಯಿ ನಗದು ಸುಟ್ಟು ಹೋಗಿದ್ದು, ಟಿ.ವಿ. ಶೋಕೇಸ್ ಮೇಲಿಟ್ಟಿದ್ದ ಚಿನ್ನದ ಸರ, ಎರಡು ಉಂಗುರಗಳು ನಾಪತ್ತೆಯಾಗಿವೆ. ಮನೆಯೊಳಗಿನ ಕಪಾಟು, ಮಂಚ ಸಂಪೂರ್ಣ ಸುಟ್ಟು ಕರಕಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶಿಥಿಲ ಕಟ್ಟಡ, ಮಾಲಕನ ಅಮಾನುಷ ವರ್ತನೆ !
ಪಂಡಿತ್ ಹೌಸ್ ನಲ್ಲಿರುವ ವಿಜಯಾ ಕಾಂಪ್ಲೆಕ್ಸ್ ಕಟ್ಟಡ ಹಳೆಯದಾಗಿದ್ದು ಶಿಥಿಲಗೊಂಡಿದೆ. ವಿದ್ಯುತ್ ಸಂಪರ್ಕದ ತಂತಿಗಳು ಹಳೆಯದಾಗಿದ್ದು ನಾದುರಸ್ತಿ ಸ್ಥಿತಿಯಲ್ಲಿದೆ. ಘಟನೆಯಿಂದ ತನ್ನ ಸೊತ್ತನ್ನು ಕಳಕೊಂಡ ವಿದ್ಯಾ ಶೆಟ್ಟಿಯವರು ದುಃಖದಲ್ಲಿದ್ದು ಸ್ಥಳಕ್ಕಾಗಮಿಸಿದ ಕಟ್ಟಡ ಮಾಲಕ ವಿಧವೆಯ ವಿರುದ್ಧವೇ ಹರಿಹಾಯ್ದು ಮನೆ ಖಾಲಿ ಮಾಡುವಂತೆ ಮಾನವೀಯತೆ ಮರೆತು ವರ್ತಿಸಿದ್ದಾನೆಂದು ಸ್ಥಳೀಯರು ತಿಳಿಸಿದ್ದಾರೆ. ತೊಕ್ಕೊಟ್ಟು ಮತ್ತಿತರ ಕಡೆ ಬಾರ್ ಹೊಂದಿರುವ ಕಟ್ಟಡ ಮಾಲಕನ ಅಮಾನವೀಯತೆ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Fire breaks out at old building in Thokottu, Mangalore. The Building also had a house in which a widow was residing is said to be completely gutted by the fire accident.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm