ಬ್ರೇಕಿಂಗ್ ನ್ಯೂಸ್
02-12-23 01:50 pm Mangalore Correspondent ಕರಾವಳಿ
ಮಂಗಳೂರು, ಡಿ.2: ಭ್ರೂಣ ಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಮೈಸೂರಿನ ವೈದ್ಯ ಡಾ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಡಾ.ಸತೀಶ್ ನಮ್ಮ ಇಲಾಖೆಯಲ್ಲಿ ಆಯುಷ್ ಅಧಿಕಾರಿಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಭ್ರೂಣ ಹತ್ಯೆ ಪ್ರಕರಣಕ್ಕೂ ಸತೀಶ್ ಆತ್ಮಹತ್ಯೆಗೂ ಲಿಂಕ್ ಇದ್ಯಾ ನೋಡಬೇಕು. ಪೊಲೀಸರು ತನಿಖೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
ಭ್ರೂಣ ಹತ್ಯೆ ಸಂಬಂಧಿಸಿ ಎಲ್ಲ ಕಡೆ ಭೇಟಿ ಕೊಟ್ಟು ಮಾಹಿತಿ ಕಲೆ ಹಾಕಿದ್ದೇನೆ. ಸಾರ್ವಜನಿಕರು ಸೇರಿ ಹಲವರ ಬಳಿ ಮಾಹಿತಿ ಪಡೆದು ಮುಖ್ಯಮಂತ್ರಿಗೆ ಸಿಐಡಿ ತನಿಖೆ ಕೊಡಲು ಮನವಿ ಮಾಡಿದ್ದೆ. ಬಳಿಕ ಸಿಐಡಿ ತನಿಖೆಗೆ ಸಿಎಂ ಆದೇಶ ಮಾಡಿದ್ದರು. ಸ್ಪಷ್ಟ ಲೋಪ ಕಂಡುಬಂದ ಕಾರಣ ಇಬ್ಬರು ಅಧಿಕಾರಿಗಳ ಅಮಾನತು ಆಗಿದೆ.
ಈ ವೇಳೆ, ಡಾ.ಸತೀಶ್ ಅವರೂ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಅಂತ ಮಾಹಿತಿ ಬಂತು. ಈಗವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಆದರೆ ಯಾಕೆ ಮಾಡಿದ್ದಾರೆ ಗೊತ್ತಿಲ್ಲ. ಈ ಪ್ರಕರಣಕ್ಕೂ ಸತೀಶ್ ಆತ್ಮಹತ್ಯೆಗೂ ಲಿಂಕ್ ಇದ್ಯಾ ನೋಡಬೇಕು. ಸತೀಶ್ ಕೂಡ ನಮ್ಮ ಆಯುಷ್ ಅಧಿಕಾರಿ, ಅವರ ಮೇಲೆ ಆರೋಪ ಇದೆ. ಆಯುಷ್ ಅಧಿಕಾರಿ ಆಗಿದ್ರೂ ಅಲೋಪತಿ ಪ್ರಾಕ್ಟಿಸ್ ಮಾಡ್ತಿದ್ರಂತೆ. ಇವರ ಮೇಲೆ ಸಾಕಷ್ಟು ಆರೋಪ ಇದೆ, ಮೈಸೂರಲ್ಲೂ ದೂರುಗಳಿದ್ದವು.
ಪ್ರಕರಣದಲ್ಲಿ ನಮ್ಮ ಇಲಾಖೆಯ ಅನೇಕ ಅಧಿಕಾರಿಗಳು ಶಾಮೀಲಾಗಿದ್ದಾರೆ. ಆದರೆ ಅದೆಲ್ಲ ತನಿಖೆಯಲ್ಲಿ ಗೊತ್ತಾಗಬೇಕು, ಪೊಲೀಸರು ತನಿಖೆ ನಡೆಸ್ತಾರೆ. ಆದರೆ ಅವರ ಆತ್ಮಹತ್ಯೆ ಯಾಕಾಗಿದೆ ಗೊತ್ತಿಲ್ಲ, ಇದಕ್ಕೂ ಅದಕ್ಕೂ ಸಂಬಂಧ ಇದ್ಯಾ ಗೊತ್ತಿಲ್ಲ. ಹೀಗಾಗಿ ನಾನು ಆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಪೊಲೀಸ್ ಇಲಾಖೆ ಮತ್ತು ಸಿಐಡಿ ಈ ಬಗ್ಗೆ ಸಮಗ್ರ ತನಿಖೆ ನಡೆಸಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಭ್ರೂಣ ಹತ್ಯೆ ತಡೆಯಲು ಕಠಿಣ ಕಾನೂನು ಅವಶ್ಯವಿದೆ. ಕಾನೂನಿನಲ್ಲಿ ಬದಲಾವಣೆ ಆಗಬೇಕಾ ಎಂಬ ಬಗ್ಗೆ ಚಿಂತನೆ ನಡೆಸಲಾಗ್ತಿದೆ. ಸ್ಕ್ಯಾನಿಂಗ್ ಸೆಂಟರ್ ಸೇರಿ ಹಲವು ಕಡೆ ಪರಿಶೀಲನೆ ಆಗಬೇಕಿದೆ. ಅದರ ಜೊತೆಗೆ ಕೆಲವು ಗುಪ್ತಚರ ಮಾಹಿತಿ ಕಲೆ ಹಾಕಬೇಕಿದೆ. ಇದರಲ್ಲಿ ಯಾರಿದ್ದಾರೆ, ಯಾರು ಮಾಡ್ತಿದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಜೊತೆ ಆರೋಗ್ಯ ಇಲಾಖೆ ಕೂಡ ಭಾಗಿಯಾಗಬೇಕಿದೆ. ಅವರಿಗೆ ಸಹಕಾರ ಕೊಟ್ಟು ನಿಜಾಂಶ ತಿಳಿಯೋ ಕೆಲಸ ಆಗಬೇಕಿದೆ ಎಂದು ಗುಂಡೂರಾವ್ ಹೇಳಿದರು.
Health minister Dinesh Gundu Rao on Saturday December 2, clarified on the chaos prevailing over the dialysis system in Karnataka and said, “The chaos over dialysis was existing even before I took charge as health minister. The earlier government had given the contract to two agencies.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm