ಬ್ರೇಕಿಂಗ್ ನ್ಯೂಸ್
02-12-23 03:32 pm Mangalore Correspondent ಕರಾವಳಿ
ಮಂಗಳೂರು, ಡಿ.2: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ರೌಂಡ್ಸ್ ಹಾಕಿದ್ದಾರೆ. ಬಂದರು ದಕ್ಕೆಯಲ್ಲಿ ನಡೆದು ಸಾಗಿದ ಸಚಿವರು ಸುಡು ಬಿಸಿಲಿನಲ್ಲೇ ಮೀನುಗಾರರ ಸಮಸ್ಯೆ ಆಲಿಸಿದ್ದಾರೆ.
ಮೀನುಗಾರಿಕಾ ಬಂದರಿನಲ್ಲಿ ಒಂದು ಗಂಟೆ ಕಾಲ ಸುತ್ತಾಡಿದ ಸಚಿವರು ಮೀನುಗಾರ ಮುಖಂಡರು, ಬೋಟ್ ಮಾಲೀಕರು, ಬಂದರು ಸಿಬ್ಬಂದಿ ಜೊತೆ ಮಾತುಕತೆ ನಡೆಸಿದರು. ಈ ವೇಳೆ, ಮೀನುಗಾರಿಕಾ ಬಂದರಿನ ಅವ್ಯವಸ್ಥೆಗಳ ಬಗ್ಗೆ ಮೀನುಗಾರರು ಸಚಿವರ ಗಮನಕ್ಕೆ ತಂದರು. ಸಮುದ್ರದ ಅಳಿವೆ ಬಾಗಿಲಿನಲ್ಲಿ ಹೂಳೆತ್ತದೇ ಇರುವುದರಿಂದ ಬೋಟ್ ಗಳ ಬಂದರು ಪ್ರವೇಶಕ್ಕೆ ಸಮಸ್ಯೆಯಾಗಿದೆ. ಬಂದರು ವ್ಯಾಪ್ತಿಯ ನೀರಿನಲ್ಲಿ ಕಸ ಮತ್ತು ಕೆಸರು ತುಂಬಿ ದುರ್ನಾತ ಬೀರುತ್ತಿದೆ ಎಂದು ಮೀನುಗಾರರು ಸಮಸ್ಯೆ ಹೇಳಿಕೊಂಡರು.


ಮೀನಿನ ಬಾಕ್ಸ್ ಇಡಲು ಹಾಗೂ ಮೀನು ಹರಾಜಿಗೆ ಪ್ರತ್ಯೇಕ ಜಾಗ ಇಲ್ಲದಿರುವ ಬಗ್ಗೆಯೂ ಅಳಲು ಹೇಳಿಕೊಂಡರು. ಕೋಟ್ಯಾಂತರ ರೂಪಾಯಿ ವಹಿವಾಟು ನಡೆಯುವ ಮೀನುಗಾರಿಕಾ ಬಂದರಿಗೆ ಭದ್ರತೆ ಇಲ್ಲ, ಮೀನುಗಾರಿಕೆ ಹಡಗಿಗೂ ಭದ್ರತೆ ಇಲ್ಲ, ಒಂದು ಸಿಸಿ ಕ್ಯಾಮಾರಾನೂ ಇಲ್ಲ ಎಂದು ಆತಂಕ ಹೇಳಿಕೊಂಡರು. ಅಲ್ಲದೆ, ಮೀನು ರಫ್ತಿಗೆ ಉದ್ಯಮಿಗಳು ಬಂದರೂ ಸ್ವಚ್ಛತೆ ಇಲ್ಲದಿರುವುದರಿಂದ ವಾಪಸ್ ಹೋಗ್ತಾರೆ ಅಂತ ಮೀನುಗಾರ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹಾಗೂ ಇತರ ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್ ನಾಯಕರು ಜೊತೆಗಿದ್ದರು.

ಸೆಕ್ಯೂರಿಟಿ ವ್ಯವಸ್ಥೆ ಇಲ್ಲದಿರೋದು ಆತಂಕದ ವಿಷಯ
ಇದೇ ವೇಳೆ, ಮಾಧ್ಯಮಕ್ಕೆ ಹೇಳಿಕೆ ನೀಡಿದ ಸಚಿವ ದಿನೇಶ್ ಗುಂಡೂರಾವ್, ಮೀನುಗಾರರು ಮತ್ತು ಇಲ್ಲಿನ ಮುಖಂಡರು ಸಮಸ್ಯೆ ಹೇಳಿಕೊಂಡಿದ್ದಾರೆ. ಇಲ್ಲಿನ ಮುಖ್ಯ ಸಮಸ್ಯೆ ಬಗ್ಗೆ ಅವಲೋಕನ ಮಾಡಿದ್ದೇನೆ. ಮುಂದೆ ಸಭೆ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ತೇನೆ. ಮೀನುಗಾರಿಕಾ ಬಂದರಿನಲ್ಲಿ ಹಲವಾರು ಸೆಕ್ಯೂರಿಟಿ ಲ್ಯಾಪ್ಸ್ ಇರುವ ಬಗ್ಗೆ ಗಮನಕ್ಕೆ ಬಂದಿದೆ. ಸಮುದ್ರದ ಪಕ್ಕದಲ್ಲಿರುವ ಕಾರಣ ಭದ್ರತೆ ಮತ್ತು ಸುರಕ್ಷಣೆ ಮುಖ್ಯ. ರಾಷ್ಟ್ರ ಮತ್ತು ರಾಜ್ಯದ ಹಿತ ಇದರಲ್ಲಿ ಅಡಕವಾಗಿದೆ. ಇಲ್ಲಿ ಸೆಕ್ಯೂರಿಟಿ ವ್ಯವಸ್ಥೆ ಇಲ್ಲದಿರೋದು ಬಹಳ ಚಿಂತಾಜನಕ ವಿಷಯ. ಈ ಬಗ್ಗೆ ಖಂಡಿತವಾಗಿಯೂ ಗಮನ ಹರಿಸುತ್ತೇನೆ. ಬಹಳಷ್ಟು ಸಮಸ್ಯೆಗಳಿವೆ, ಈ ಬಗ್ಗೆ ಸಭೆ ಮಾಡಿ ಚರ್ಚೆ ಮಾಡ್ತೇವೆ ಎಂದು ಹೇಳಿದರು.


ಅಂಜಲ್ ಮೀನು ಹರಾಜು ಕೂಗಿದ ಗುಂಡೂರಾವ್
ಬಂದರು ದಕ್ಕೆಯಲ್ಲಿ ಸುತ್ತಾಟದ ವೇಳೆ ಮೀನು ಹರಾಜು ಆಗುತ್ತಿದ್ದ ಜಾಗಕ್ಕೆ ತೆರಳಿದ ಸಚಿವ ದಿನೇಶ್ ಗುಂಡೂರಾವ್, ಸ್ವತಃ ಅಂಜಲ್ ಮೀನನ್ನು ಕೈಯ್ಯಲ್ಲಿ ಎತ್ತಿಕೊಂಡು ಹರಾಜು ಕೂಗಿದ್ದಾರೆ. ಜೊತೆಗಿದ್ದ ಕಾಂಗ್ರೆಸ್ ಮುಖಂಡರು ಅಂಜಲ್ ಮೀನು ಹಿಡಿದು ಪೋಸು ಕೊಟ್ಟಿದ್ದಾರೆ. 150 ರೂ.ನಿಂದ ಹರಾಜು ಆರಂಭಿಸಿದ ಸಚಿವರ ಬಗ್ಗೆ ಮೀನುಗಾರರು ಖುಷ್ ಆಗಿದ್ದಾರೆ. ಸಚಿವರಾದ ಬಳಿಕ ಮೊದಲ ಬಾರಿಗೆ ಮಂಗಳೂರಿನ ಬಂದರು ದಕ್ಕೆಯ ಹರಾಜು ಏರಿಯಾದಲ್ಲಿ ಗುಂಡೂರಾವ್ ಸುತ್ತಾಟ ನಡೆಸಿದ್ದು ಮೀನುಗಾರರ ಜೊತೆ ಬೆರೆತು ಅವರ ಸಮಸ್ಯೆ ಆಲಿಸಿದ್ದಾರೆ.
Minister Dinesh Gundu Rao visits Mangalore fishing harbour, listens to fishermen issues.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm