ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm