ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm