ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm