ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm