ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm