ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm