ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm