ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm