ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm