ಪಟಾಕಿ ಮಾರಾಟಕ್ಕೆ ನಿಯಂತ್ರಣ ; ಮಂಗಳೂರಿನ ವಿವಿಧೆಡೆ ಅಧಿಕಾರಿಗಳ ದಾಳಿ 

16-11-20 05:58 pm       Mangaluru Correspondent   ಕರಾವಳಿ

ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ. 

ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ. 

ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. 

ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ. 

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.