ಬ್ರೇಕಿಂಗ್ ನ್ಯೂಸ್
04-12-23 03:45 pm Mangalore Correspondent ಕರಾವಳಿ
ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಮತ್ತು ಹಲ್ಲೆಗೈದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾ ಕೋರ್ಟ್ ಮುಂಭಾಗದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಮಂದಿ ವಕೀಲರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮಾತನಾಡಿ, ಚಿಕ್ಕಮಗಳೂರು ವಕೀಲರ ಜೊತೆಗೆ ನಾವಿದ್ದೇವೆ. ಈ ಪ್ರಕರಣದಲ್ಲಿ ಪೊಲೀಸರು ಲೋಪ ಮಾಡಿದ್ದಾರೆ. ಸರಕಾರವೇ ಮಧ್ಯ ಪ್ರವೇಶ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ನಾವು ನಮ್ಮ ನ್ಯಾಯವನ್ನು ಕೋರ್ಟಿನಲ್ಲಿ ಪಡೆಯುತ್ತೇವೆ ಎಂದಿದ್ದಾರೆ.



ಹಿರಿಯ ವಕೀಲ ಮನೋರಾಜ್ ರಾಜೀವ ಮಾತನಾಡಿ, ಯಾರೇ ಆದರೂ ಬೈಕ್ ಕೀ ತೆಗೆದಿದ್ದನ್ನು ಪ್ರಶ್ನೆ ಮಾಡಿದ ಮಾತ್ರಕ್ಕೆ ಪೊಲೀಸರು ಹೊಡೆಯಬೇಕಿತ್ತಾ.. ಅಷ್ಟು ಮಾತನಾಡೋದಕ್ಕೂ ಅಭಿಪ್ರಾಯ ಸ್ವಾತಂತ್ರ್ಯ ಇಲ್ಲವೇ.. ಇವರೇ ಅಷ್ಟೊಂದು ಹಲ್ಲೆಗೈದು ಈಗ ಪ್ರತಿಭಟನೆ ಮಾಡಿದರೆ ಹೇಗೆ.. ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಹಲ್ಲೆಗೈದ ಮೇಲೆ ಎಫ್ಐಆರ್ ದಾಖಲಿಸಿ, ಸ್ಟೇಶನ್ ಜಾಮೀನು ಹೇಗೆ ಕೊಟ್ಟಿದ್ದಾರೆ. ಎಸ್ಪಿಯವರು ಕೇಸು ದಾಖಲಿಸುತ್ತಾರೆ, ಡಿವೈಎಸ್ಪಿ ಸ್ಟೇಶನ್ ಬೈಲ್ ಕೊಟ್ಟು ನ್ಯಾಯಾಲಯ ಮಾಡೋ ಕೆಲಸವನ್ನು ತಾನೇ ಮಾಡಿದ್ದಾರೆ. ನಾವು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದರು.
Chikmagalur assult on lawyer, protest by lawyers in Mangalore demanding justice near the court premises. An incident took place in Chikmagalur where a young lawyer who came without wearing a helmet on a two-wheeler was cornered in the police station and 6 policemen including the PSI were suspended in connection with the incident.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm