ಬ್ರೇಕಿಂಗ್ ನ್ಯೂಸ್
04-12-23 03:45 pm Mangalore Correspondent ಕರಾವಳಿ
ಮಂಗಳೂರು, ಡಿ.4: ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಮತ್ತು ಹಲ್ಲೆಗೈದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರಿನ ಜಿಲ್ಲಾ ಕೋರ್ಟ್ ಮುಂಭಾಗದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.
ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಮಂದಿ ವಕೀಲರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ಮಾತನಾಡಿ, ಚಿಕ್ಕಮಗಳೂರು ವಕೀಲರ ಜೊತೆಗೆ ನಾವಿದ್ದೇವೆ. ಈ ಪ್ರಕರಣದಲ್ಲಿ ಪೊಲೀಸರು ಲೋಪ ಮಾಡಿದ್ದಾರೆ. ಸರಕಾರವೇ ಮಧ್ಯ ಪ್ರವೇಶ ಮಾಡಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿತ್ತು. ಅದನ್ನು ಮಾಡಿಲ್ಲ. ಈಗ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ. ನಾವು ನಮ್ಮ ನ್ಯಾಯವನ್ನು ಕೋರ್ಟಿನಲ್ಲಿ ಪಡೆಯುತ್ತೇವೆ ಎಂದಿದ್ದಾರೆ.



ಹಿರಿಯ ವಕೀಲ ಮನೋರಾಜ್ ರಾಜೀವ ಮಾತನಾಡಿ, ಯಾರೇ ಆದರೂ ಬೈಕ್ ಕೀ ತೆಗೆದಿದ್ದನ್ನು ಪ್ರಶ್ನೆ ಮಾಡಿದ ಮಾತ್ರಕ್ಕೆ ಪೊಲೀಸರು ಹೊಡೆಯಬೇಕಿತ್ತಾ.. ಅಷ್ಟು ಮಾತನಾಡೋದಕ್ಕೂ ಅಭಿಪ್ರಾಯ ಸ್ವಾತಂತ್ರ್ಯ ಇಲ್ಲವೇ.. ಇವರೇ ಅಷ್ಟೊಂದು ಹಲ್ಲೆಗೈದು ಈಗ ಪ್ರತಿಭಟನೆ ಮಾಡಿದರೆ ಹೇಗೆ.. ಕಾನೂನು ಎಲ್ಲರಿಗೂ ಒಂದೇ ಇರುತ್ತದೆ. ಹಲ್ಲೆಗೈದ ಮೇಲೆ ಎಫ್ಐಆರ್ ದಾಖಲಿಸಿ, ಸ್ಟೇಶನ್ ಜಾಮೀನು ಹೇಗೆ ಕೊಟ್ಟಿದ್ದಾರೆ. ಎಸ್ಪಿಯವರು ಕೇಸು ದಾಖಲಿಸುತ್ತಾರೆ, ಡಿವೈಎಸ್ಪಿ ಸ್ಟೇಶನ್ ಬೈಲ್ ಕೊಟ್ಟು ನ್ಯಾಯಾಲಯ ಮಾಡೋ ಕೆಲಸವನ್ನು ತಾನೇ ಮಾಡಿದ್ದಾರೆ. ನಾವು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ ಎಂದು ಹೇಳಿದರು.
Chikmagalur assult on lawyer, protest by lawyers in Mangalore demanding justice near the court premises. An incident took place in Chikmagalur where a young lawyer who came without wearing a helmet on a two-wheeler was cornered in the police station and 6 policemen including the PSI were suspended in connection with the incident.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm